Narendra Modi 75: ಇವರು ಯಾರು ಬಲ್ಲಿರಾ? ಯಾಕೀ ಕಸರತ್ತು ಗೊತ್ತಾ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ (PM Narendra Modi birthday) ಇದೇ ತಿಂಗಳ 17 ರಂದು 75 ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಭಾರತ ಕಂಡ ಅಪರೂಪದ ಪ್ರಧಾನಿಯ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಗೌರವಾರ್ಥವಾಗಿ (PM Narendra Modi 75) ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ -BJYM) ಈ ವರ್ಷವೂ ಸಮಾಜಸೇವೆಯ ಅಂಗವಾಗಿ ಸೇವಾ ಪಖ್ವಾಡಾ (seva pakhwada 2025) ಹಮ್ಮಿಕೊಂಡಿದೆ. ಈ ಬಾರಿ ಸೇವಾ ಪಖ್ವಾಡಾದ ಭಾಗವಾಗಿ ನಡೆಯುವ ಬಿಜೆವೈಎಂ ನಮೋ ಯುವ ಓಟವು ನಶಾ ಮುಕ್ತ ಭಾರತಕ್ಕಾಗಿ ಎಂಬ ಘೋಷವಾಕ್ಯವನ್ನು ಹೊಂದಿದೆ. ಈ ಕುರಿತು ಬೆಂಗಳೂರು ದಕ್ಷಿಣ ಸಂಸದ ಹಾಗೂ ಭಾರತೀಯ ಜನತಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ (MP Tejasvi Surya) ಅವರು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

Narendra Modi 75 BJYM NaMo Yuva national run ambassador Milind Soman and Tejasvi Surya participate in press conference 4

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಶ್ರೀ ಮನ್ಸುಖ್ ಮಾಂಡವೀಯ (Union Minister for Youth Affairs and Sports Mansukh Mandaviya) ಮತ್ತು ಶ್ರೀ ಮಿಲಿಂದ್ ಸೋಮನ್ (Milind Soman) ಅವರು ಉಪಸ್ಥಿತರಿದ್ದರು. ಸುದ್ದಿಗೋಷ್ಠಿ ಸಂದರ್ಭದಲ್ಲಿ ವೇದಿಕೆ ಮೇಲಿಂದಲೇ ತೇಜಸ್ವಿ ಸೂರ್ಯ ಮತ್ತು ಮಿಲಿಂದ್ ಸೋಮನ್ ಅವರು ತಮ್ಮ ದೈಹಿಕ ಸಾಮರ್ಥ್ಯವನ್ನು ಪ್ರಚುರಪಡಿಸಿದರು.

ಈ ಓಟವು ಸೆಪ್ಟೆಂಬರ್ 21, 2025 ರಂದು ನಿಗದಿಯಾಗಿದ್ದು, ದೇಶಾದ್ಯಂತ ಏಕಕಾಲದಲ್ಲಿ 100 ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಪ್ರತಿ ಕಾರ್ಯಕ್ರಮದಲ್ಲಿ ತಲಾ ಕನಿಷ್ಠ 10,000 ಮಂದಿ ಭಾಗವಹಿಸುವ ಗುರಿ ಹೊಂದಿದೆ. ದಶಕಗಳ ಕಾಲದ ಫಿಟ್‌ನೆಸ್ ಐಕಾನ್, ಬಾಲಿವುಡ್‌ ನಟ ಮಿಲಿಂದ್ ಸೋಮನ್ ಅವರು ದೇಶಾದ್ಯಂತ ಯುವಕರನ್ನು ತಮ್ಮ ಫಿಟ್‌ನೆಸ್ ಮತ್ತು ಅಥ್ಲೆಟಿಕ್ ಸಾಮರ್ಥ್ಯಗಳಿಂದ ಪ್ರೇರೇಪಿಸುವ ರಾಷ್ಟ್ರೀಯ ಓಟದ ರಾಯಭಾರಿಯಾಗಿದ್ದಾರೆ.

ಈ ಓಟವು 10 ಲಕ್ಷಕ್ಕೂ ಹೆಚ್ಚು ಯುವಕರನ್ನು ತೊಡಗಿಸಿಕೊಳ್ಳುತ್ತದೆ ಮತ್ತು ಭಾರತದ ಅತಿದೊಡ್ಡ ಯುವ ಫಿಟ್‌ನೆಸ್ ಮತ್ತು ಜಾಗೃತಿ ಅಭಿಯಾನದ ಹಿಂದಿನ ಪ್ರೇರಕ ಶಕ್ತಿಯಾಗಿ ಬಿಜೆವೈಎಂ ತನ್ನ ಪಾತ್ರವನ್ನು ಬಲಪಡಿಸುತ್ತದೆ ಎಂದು BJYM ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ನಮ್ಮ ರಾಷ್ಟ್ರದ ಭವಿಷ್ಯವು ಯುವಜನತೆಯನ್ನು ಅವಲಂಬಿಸಿದೆ. ಹಾಗಾಗಿ ಈ ಆಂದೋಲನವು ಬಿಜೆವೈಎಂ ಧ್ಯೇಯಕ್ಕೆ ಅನುಗುಣವಾಗಿ ಆರೋಗ್ಯಕರ ಮತ್ತು ಸದೃಢ ಭಾರತ ನಿರ್ಮಾಣಕ್ಕೆ ಅನುಗುಣವಾಗಿದೆ ಎಂದು ತೇಜಸ್ವಿ ತಿಳಿಸಿದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles