ಬೆಂಗಳೂರು ಪೊಲೀಸರಿಂದ ಸಕಾರಾತ್ಮಕ ಕಥೆಗಳ ಹಾಗೂ ಹೊಸ ಕ್ರಮಗಳ ಕುರಿತು.

ವಿಜಯನಗರ ಉಪ ವಿಭಾಗ, ಮಾಗಡಿ ರಸ್ತೆ ಪೊಲೀಸ್ ಠಾಣೆ

ದಿನಾಂಕ:25-09-2025 ರಂದು   ಮಹೇಶ್ ಪ್ರಸಾದ್ ಎಂಬುವವರು ಅಮೇರಿಕಾದಿಂದ ಬೆಂಗಳೂರಿಗೆ ಬಂದಿದ್ದು, ಮಾರ್ಗ ಮದ್ಯ ರಾಜ್‌ಕುಮಾರ್ ರಸ್ತೆ ಬಳಿ ಕಾರಿನಿಂದ ಇಳಿಯುವ ಸಂದರ್ಭದಲ್ಲಿ ತಮ್ಮ ಪರ್ಸನ್ನು ಕಳೆದುಕೊಂಡಿದ್ದು, ಅದರಲ್ಲಿ ವಿದೇಶಿ ಕರೆನ್ಸಿ, ಕ್ರೇಡಿಟ್ ಕಾರ್ಡ್ ಹಾಗೂ ಮುಖ್ಯವಾದ ದಾಖಲಾತಿಗಳು ಇದ್ದವೆಂದು, ಪರ್ಸನ್ನು ಪತ್ತೆಮಾಡಿ ಕೊಡಬೇಕೆಂದು ಠಾಣೆಗೆ ಬಂದು ಮೌಖಿಕವಾಗಿ ತಿಳಿಸಿದಾಗ ಪಿ.ಐ ರವರು ಠಾಣೆಯ ಸಿಬ್ಬಂದಿಗಳಾದ   ಕಾರ್ತಿಕ್ ಪ್ರಸಾದ್ ಪಿಎಸ್‌ಐ  ಕುಮಾರ್ ಕೆ.ಆರ್ ಎಎಸ್‌ಐ, ರವಿಕುಮಾರ್ ಆರ್ ಎ ಹೆಚ್‌ಸಿ, ಪ್ರವೀಣ್ ಕುಮಾರ್ ವಿ ಆರ್ ಹೆಚ್‌ಸಿ, ನಾಗರಾಜ್ ಟಿ ಎಸ್ ಹೆಚ್‌ಸಿ ರವರಿಗೆ ಪತ್ತೆ ಮಾಡಿ ಕೊಡುವಂತೆ ಸೂಚಿಸಿದ್ದು, ಅವರುಗಳು ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲಿಸಿ ಪರ್ಸನ್ನು ಪತ್ತೆ ಮಾಡಿ ಮಹೇಶ್ ಪ್ರಸಾದ್ ರವರನ್ನು ಕರೆಸಿ ಅವರ ಪರ್ಸನ್ನು ವಾಪಸ್ಸು ನೀಡಿರುತ್ತಾರೆ.

ಮಹಿಳಾ ಪೊಲೀಸ್ ಠಾಣೆ, ಉತ್ತರ ವಿಭಾಗ.

ಮಹಿಳಾ ಪೊಲೀಸ್ ಠಾಣೆ, ಉತ್ತರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಹೆಚ್‌ಸಿ-ಶ್ರೀಮತಿ. ಶಕುಂತಲಾ ರವರು, ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೇಂದ್ರಿಯ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ “ಮಕ್ಕಳ ಮೇಲಿನ ದೌರ್ಜನ್ಯ” ಪ್ರಕರಣ ತಡೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ವಿದ್ಯಾರ್ಥಿನಿಯರಿಗೆ ಕಾನೂನು ಅರಿವು ಮೂಡಿಸಿರುತ್ತಾರೆ.

ಉತ್ತರ ವಿಭಾಗದ, ಮಹಾಲಕ್ಷಿ ಲೇಔಟ್ ಪೊಲೀಸ್ ಠಾಣೆ.

ಮಹಾಲಕ್ಷಿ ಲೇಔಟ್ ಪೊಲೀಸ್ ಠಾಣೆಯ ಹೆಚ್‌ಸಿ ಕೆಂಪರಾಮಯ್ಯ ಮತ್ತು ರಾಜು ಕಲಾಲ್ ರವರುಗಳು ಅವರ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿ ಸತೀಶ್ @ ಗೊಣ್ಣೆ ಬಿನ್ ಭೀಮಯ್ಯ ಈತನು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ, ಈ ಆರೋಪಿಯ ವಿರುದ್ಧ ಘನ ನ್ಯಾಯಾಲಯವು ಉದ್ಘೋಷಣೆಯನ್ನು ಹೊರಡಿಸಿದ್ದು, ಸದರಿ ಆರೋಪಿಯನ್ನು ದಿನಾಂಕ:23/09/2025 ರಂದು ಕೆಂಪರಾಮಯ್ಯ ಮತ್ತು ರಾಜು ಕಲಾಲ್ ರವರುಗಳು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಮಾಡಿ, ಘನ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಅದೇ ಪ್ರಕಾರ ಮಹಾಲಕ್ಷಿ ಲೇಔಟ್‌ನ ಮತ್ತೊಂದು ಪ್ರಕರಣದಲ್ಲಿ ಘನ ನ್ಯಾಯಾಲಯವು ಆರೋಪಿ ಕಿಶೋರ್ @ ಪೀಚು ಬಿನ್ ಕರುಣಾಕರ ವಿರುದ್ಧ ವಾರೆಂಟ್ ಹೊರಡಿಸಿದ್ದು, ಈ ಆರೋಪಿಯನ್ನು ಕೆಂಪರಾಮಯ್ಯ ಮತ್ತು ರಾಜು ಕಲಾಲ್ ರವರುಗಳು ದಿನಾಂಕ:23/09/2025 ರಂದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಮಾಡಿ, ಘನ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles