ವಿಮಾನ ದುರಂತ: ಅಹಮದಾಬಾದ್‌ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ನವದೆಹಲಿ: ಏರ್​ ಇಂಡಿಯಾ ವಿಮಾನ ಅಪಘಾತ ದುರಂತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಅಹಮದಾಬಾದ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ. ಅಪಘಾತ ಸ್ಥಳ ಹಾಗೂ ಸಿವಿಲ್ ಆಸ್ಪತ್ರೆಗೆ ತೆರಳಿ ಅವರು ಪರಿಶೀಲನೆ ನಡೆಸುವ ಸಾಧ್ಯತೆಯಿದೆ.

ಈ ಬಗ್ಗೆ ಎನ್​ಎನ್​ಐ ವರದಿ ಮಾಡಿದ್ದು, ಪ್ರಧಾನಿ ಅವರು ಅಪಘಾತದಲ್ಲಿ ಮೃತಪಟ್ಟ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಗೆ ಅಂತಿಮ ನಮನ ಸಲ್ಲಿಸುವ ನಿರೀಕ್ಷೆಯಿದೆ. ಬಳಿಕ ಅವರು ಕೇಂದ್ರ ಮತ್ತು ರಾಜ್ಯ ನಾಯಕರು ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವ ನಿರೀಕ್ಷೆಯಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ಸಚಿವರಾದ ಮಿನ್ ರಾಮ್ ನಾಯಕ್, ಸಿ ಆರ್ ಪಾಟೀಲ್ ಅವರು ಪ್ರಧಾನಿ ಅವರೊಂದಿಗೆ ಆಗಮಿಸುವ ನಿರೀಕ್ಷೆಯಿದೆ.

ಗುರುವಾರ ಸಂಜೆ ವಿಮಾನ ಪತನಗೊಂಡ ಸ್ಥಳಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಳಿಕ ನೇರವಾಗಿ ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ, ಗುಜರಾತ್​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಸಭೆ ನಡೆಸಿ ಇಡೀ ಘಟನೆಯ ಬಗ್ಗೆ ವಿವರವಾದ ಮಾಹಿತಿ ಪಡೆದಿದ್ದಾರೆ. ದುರಂತದಲ್ಲಿ ಎಷ್ಟು ಮಂದಿ ಮೃತಪಟ್ಟರು ಎಂಬುದನ್ನು ಡಿಎನ್ಎ ಪರೀಕ್ಷೆ ನಡೆಸಿದ ನಂತರ ಘೋಷಿಸಲಾಗುವುದು. ವಿಮಾನದಲ್ಲಿ ಸುಮಾರು 1,25,000 ಲೀಟರ್ ಇಂಧನ ಇತ್ತು. ಪತನದ ಸಂದರ್ಭದಲ್ಲಿ ಇಂಧನ ಹೊತ್ತಿ ಉರಿಯುತ್ತಿದ್ದುದರಿಂದ ಸ್ಥಳದಲ್ಲಿ ಭಾರೀ ಪ್ರಮಾಣದ ತಾಪಮಾನವಿತ್ತು. ಹಾಗಾಗಿ, ಅಲ್ಲಿ ಯಾರನ್ನೂ ಉಳಿಸಲು ಅವಕಾಶವಿರಲಿಲ್ಲ ಎಂದು ಅವರು ತಿಳಿಸಿದ್ದರು.

ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಔಪಚಾರಿಕ ತನಿಖೆಯನ್ನು ಪ್ರಾರಂಭಿಸಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಗುರುವಾರ ದೃಢಪಡಿಸಿದ್ದಾರೆ.

ಗುರುವಾರ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಇಲ್ಲಿನ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು. ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅವಘಡ ಸಂಭವಿಸಿದ್ದು, ಒಟ್ಟಾರೆ 265 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶ ಕಂಡ ಅತ್ಯಂತ ಭೀಕರ ವಾಯು ದುರಂತ ಇದಾಗಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles