Umesh Banakar: ಸ್ಯಾಂಡಲ್‌ವುಡ್‌ ನಿರ್ಮಾಪಕ ಉಮೇಶ್ ಬಣಕಾರ್‌ಗೆ ಫಾಸ್ಟ್ ಟ್ಯಾಗ್ ರಗಳೆ! ನಿಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಿ

ಬೆಂಗಳೂರು, ಮೇ 22: ಹೆದ್ದಾರಿಗಳಲ್ಲಿ ಸರಾಗ ಸಂಚಾರಕ್ಕೆ ಅತ್ಯುತ್ತಮ ವ್ಯವಸ್ಥೆ ಎಂಬಂತೆ ಬಿಂಬಿತವಾಗಿರುವ ಫಾಸ್ಟ್ ಟ್ಯಾಗ್ ಬಗ್ಗೆ ದಿನಾಲೂ ಒಂದಲ್ಲ ಒಂದು ರಗಳೆ ಕೇಳಿಬರುತ್ತಿರುತ್ತದೆ. ಈ ಬಾರಿ ಸ್ಯಾಂಡಲ್‌ವುಡ್‌ ಲೋಕದಿಂದ ಅಪಸ್ವರ  ಎದ್ದಿದೆ. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ (KFPA) ಹಿಂದಿನ ಅಧ್ಯಕ್ಷ, ಸ್ಯಾಂಡಲ್‌ವುಡ್‌ ಪ್ರಮುಖ ನಿರ್ಮಾಪಕ (Sandalwood Producer Umesh Banakar) ಹಾಗೂ ಹಿರಿಯ ನಟ ಉಮೇಶ್ ಬಣಕಾರ್‌ ಅವರಿಗೂ ಫಾಸ್ಟ್ ಟ್ಯಾಗ್ ರಗಳೆ ಕಾಡತೊಡಗಿದೆ. (Fastag Complaint)
ಹಿರಿಯ ನಟ ಉಮೇಶ್ ಬಣಕಾರ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಫಾಸ್ಟ್ ಟ್ಯಾಗ್ ರಗಳೆ ಬಗ್ಗೆ ಹೀಗೆ ಬರೆದುಕೊಂಡಿದ್ದಾರೆ: ಜೊತೆಗೆ, ನಿಮಗೂ ಇಂತಹ ಅನುಭವಗಳಾಗಿದ್ದರೆ ಮುಕ್ತವಾಗಿ ಹಂಚಿಕೊಂಡು, ಇದೇ ವೇದಿಕೆಯಲ್ಲಿ ಚರ್ಚೆ ಮಾಡೋಣ ಎಂದು ಕರೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳ ಮಾಲೀಕರ ಗಮನಕ್ಕೆ:

ಫಾಸ್ಟ್ ಟ್ಯಾಗ್ ಹಗಲು ದರೋಡೆಕೋರರು 3,000 ರೂಪಾಯಿ ಹಣವನ್ನು ಕಟ್ಟಿಸಿಕೊಂಡು ವಾರ್ಷಿಕ ಚಂದಾದಾರರು ಎಂದು ಫಾಸ್ಟ್ ಟ್ಯಾಗ್ ನೀಡಿರುತ್ತಾರೆ. ನಾನು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ವಾಸವಾಗಿದ್ದು ನನ್ನ ವಾಹನವು ನನ್ನ ಬಳಿಯೇ ಇದೆ.

ಆದರೆ, ನೆಲಮಂಗಲದ ಟೋಲ್ ನಲ್ಲಿ ಇಂದು (ಮೇ 21) ಮುಂಜಾನೆ  8 ಗಂಟೆ 37 ನಿಮಿಷಕ್ಕೆ ಪ್ರವೇಶಿಸಿದೆ ಎಂದು ಮೆಸೇಜ್ ಬಂದಿರುತ್ತದೆ. ಹಾಗೆಯೇ ಅದೇ ದಿನ ಅಂದರೆ ನಿನ್ನೆ ಗುರುವಾರ ನೆಲಮಂಗಲದಿಂದ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ 165 ಟ್ರಿಪ್ ಗಳು ಬಾಕಿ ಎಂದೂ ಮೆಸೇಜ್ ಬಂದಿದೆ.
ಫಾಸ್ಟ್ ಟ್ಯಾಗ್ ಎಂಬ ಹಗಲು ದರೋಡೆ ಬಗ್ಗೆ ಅಭಿಪ್ರಾಯ ಹಂಚ್ಕೊಳಿ:

ನನ್ನ ಸದರಿ ವಾಹನವು ಸಂಚರಿಸದೇ ಇರುವ ದಾರಿಯಲ್ಲಿ ಇಂದು 160 ಟ್ರಿಪ್ ಗಳು ಬಾಕಿ ಉಳಿದಿದೆ ಎಂಬ ಮೆಸೇಜ್ ಬಂದಿದೆ. ಇಂತಹ ಹಗಲುದರೋಡೆಗಳನ್ನು ತಡೆಗಟ್ಟಲು ಎಲ್ಲರೂ ಒಂದಾಗಬೇಕಾಗಿದೆ. ಇನ್ನಾರಿಗಾದರೂ ಇಂತಹ ಅನುಭವಗಳು ಆಗಿದ್ದಲ್ಲಿ ಸಂಬಂಧಪಟ್ಟ ಇಲಾಖೆ ಅಥವಾ ಪೊಲೀಸ್ ಕಂಪ್ಲೇಂಟ್ ನೀಡುವ ಮೂಲಕ ಅಕ್ರಮಗಳನ್ನು ತಡೆಗಟ್ಟಬೇಕಾಗಿದೆ. ಸಂಬಂಧಪಟ್ಟ ಮೆಸೇಜ್ ಸ್ಕ್ರೀನ್ ಶಾಟ್‌  ಅನ್ನು ಇದರೊಂದಿಗೆ ಲಗತ್ತಿಸಿದ್ದೇನೆ. ದಯಮಾಡಿ ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ತಕ್ಷಣ ಜನ ಇದಕ್ಕೆ ಪ್ರತಿಕ್ರಿಯಿಸುತ್ತಿದ್ದು, ತಮಗೂ ಕರಾಳ ಅನುಭವ ಆಗಿದೆ. ಇದನ್ನು ಮಟ್ಟಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ: 

Rudresh Nagasandra: ಈ ರೀತಿ ನನಗೂ ಆಗಿದೆ ಸರ್, ಕೇಳಿದರೆ ಕಂಪ್ಲೇಂಟ್ ಮಾಡಿ ನಿಮ್ಮ ಹಣ ವಾಪಸ್ ಕೊಡುತ್ತಾರೆ ಎಂದು ಹೇಳುತ್ತಾರೆ, ಟೋಲ್ನವರು ಕಟ್ ಮಾಡಿರುವ ನೂರು ರೂಪಾಯಿ ವಸೂಲು ಮಾಡಲು ಒಂದು ದಿವಸ ಟೈಮ್ ವೇಸ್ಟ್ ಮಾಡಿಕೊಂಡು ಖರ್ಚು ಮಾಡಿಕೊಂಡು ಓಡಾಡಬೇಕು.

Oscar Krishna: ನಮಗೂ ಈ ಅನುಭವ ಆಗಿದೆ. ಇವರನ್ನ ಮಟ್ಟ ಹಾಕಲೇಬೇಕು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles