ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಅಧಿಕಾರಿ, ಸಿಬ್ಬಂದಿಗಳಿಗೆ ಸನ್ಮಾನ

ಬೆಂಗಳೂರು,ಆ.14: ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ 45 ದಿನಗಳ ಕಾಲ ಠೇವಣಿ ಮೇಳ ಆಯೋಜಿಸಲಾಗಹಿದ್ದು, ಈ ಅವಧಿಯಲ್ಲಿ ಬ್ಯಾಂಕ್ ಸದಸ್ಯರಿಂದ 25 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಮಹತ್ವದ ಸಾಧನೆ ಮಾಡಲಾಗಿದೆ.
ಈ ಯಶಸ್ಸಿನ ಸಂಭ್ರಮಾಚರಣೆಯ ಭಾಗವಾಗಿ ಬ್ಯಾಂಕ್ ಅಧ್ಯಕ್ಷ ಡಿ.ಆರ್. ವಿಜಯಸಾರಥಿ ಮತ್ತು ಉಪಾಧ್ಯಕ್ಷ ಡಾ. ಎಂ. ರಂಗಧಾಮಶೆಟ್ಟಿ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಿ ಗೌರವ ಸಮರ್ಪಿಸಲಾಯಿತು.
ಬ್ಯಾಂಕ್ ಅಧ್ಯಕ್ಷ ಡಿ.ಆರ್. ವಿಜಯಸಾರಥಿ ಮಾತನಾಡಿ, “ನಿಗದಿತ ಠೇವಣಿಗೆ ಭದ್ರತೆ ಇದ್ದು, ಆಕರ್ಷಕ ಬಡ್ಡಿ ದೊರೆಯುತ್ತದೆ, ಜೀವನ ಸುಗಮವಾಗುತ್ತದೆ ಎಂಬ ನಂಬಿಕೆಯಿಂದಲೇ ಗ್ರಾಹಕರು 45 ದಿನಗಳಲ್ಲಿ 25 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಲಾಗಿದೆ” ಎಂದು ತಿಳಿಸಿದರು.
“ಗ್ರಾಹಕರ ನಂಬಿಕೆ ಮತ್ತು ಸಂತೃಪ್ತಿ ನಮ್ಮ ಸಂಸ್ಥೆಯ ಮೂಲ ಧ್ಯೇಯವಾಗಿದೆ. ಠೇವಣಿ ಹಣವನ್ನು ಅವಶ್ಯಕತೆಯಿರುವವರಿಗೆ ಸರಳ ಮತ್ತು ಸುಲಭ ಪ್ರಕ್ರಿಯೆಯ ಮೂಲಕ ಕಡಿಮೆ ಬಡ್ಡಿಯಲ್ಲಿ ನೀಡಲಾಗುತ್ತದೆ. ಈಗಾಗಲೇ ಸಾಲಮೇಳಗಳನ್ನು ಆಯೋಜಿಸಿ ಸದಸ್ಯರಿಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸಲಾಗಿದೆ.
ಬ್ಯಾಂಕ್‌ನಲ್ಲಿ ಸಲ್ಲಿಸಿದ ದಾಖಲೆಗಳಿಗೆ ಮೂರು ಹಂತದ ಕಾನೂನು ಅಭಿಪ್ರಾಯ ಪಡೆಯುವುದರಿಂದ ಗ್ರಾಹಕರು ಮತ್ತು ಬ್ಯಾಂಕ್ಗೆ ಭದ್ರತೆ ದೊರೆಯುತ್ತದೆ. ಗ್ರಾಹಕರ ವಿಶ್ವಾಸದಿಂದ ನಗರದಲ್ಲಿ 9 ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಶೀಘ್ರದಲ್ಲೇ ರಾಮನಗರದಲ್ಲೂ ಮತ್ತೊಂದು ಶಾಖೆ ಆರಂಭಿಸುವುದಾಗಿ ತಿಳಿಸಿದರು.

ಬ್ಯಾಂಕ್ ಸಹಕಾರ ತತ್ವದ ಮೇಲೆ ಕಾರ್ಯನಿರ್ವಹಿಸುತ್ತಿದ್ದು, ಸದಸ್ಯರ ಹಿತಾಸಕ್ತಿಗಾಗಿ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ. ಸದಸ್ಯರ ವಿಕಲಚೇತನ ಮಕ್ಕಳಿಗೆ ಉಚಿತ ಪಿಯುಸಿ ಮತ್ತು ಪದವಿ ವಿದ್ಯಾಭ್ಯಾಸ, ಉಚಿತ ಆರೋಗ್ಯ ತಪಾಸಣೆ, ವಿಮಾ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮನೆ ನಿರ್ಮಿಸುವವರಿಗೆ ಸುಲಭವಾಗಿ ಸಾಲ ಸೌಲಭ್ಯ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಆರ್.ಬಿ.ಐ ನಿಯಮಗಳನ್ನು ಸರಳೀಕರಣಗೊಳಿಸಿರುವುದರಿಂದ ಮುಂದಿನ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ಸಂಪೂರ್ಣ ಡಿಜಿಟಲೀಕರಣವಾಗುತ್ತಿದೆ. ಮೊಬೈಲ್ ಬ್ಯಾಂಕಿಂಗ್, ಎಟಿಎಮ್ ಕಾರ್ಡ್ ವಿತರಣೆ ಸೇರಿದಂತೆ ಜನಸ್ನೇಹಿ ಸೇವೆಗಳನ್ನು ವಿಸ್ತರಿಸಲಾಗುವುದು ಎಂದರು.

ಠೇವಣಿ ಮೇಳದ ಯಶಸ್ಸಿಗೆ ಕಾರಣಕರ್ತರಾದ ಪ್ರಭಾರ ಪ್ರಧಾನ ವ್ಯವಸ್ಥಾಪಕ ಕೆ.ಎನ್. ಕೃಷ್ಣಯ್ಯ ಶೆಟ್ಟಿ, ಪೂರ್ಣಾವಧಿ ಸಲಹೆಗಾರ ಬಿ.ಆರ್. ನಾಗರಾಜ್ ಹಾಗು 9 ಶಾಖಾ ವ್ಯಸಸ್ಥಾಪಕರುಗಳನ್ನು ಮತ್ತು ಅಧಿಕಾರಿ, ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ನಿರ್ದೇಶಕರಾದ ವೆಂಕಟಾಚಲಪತಿ, ಬಿ.ಎಲ್.ಪಿ. ರುದ್ರಮೂರ್ತಿ, ನಾಗಭೂಷಣ್, ಎಸ್. ಸತ್ಯಮೂರ್ತಿ, ಎಂ.ಸಿ. ಫಾಲನೇತ್ರ, ಲೋಹಿತ್ ಜಿ. ನಂಜೇಗೌಡ, ಪಿ.ಕೆ. ರವೀಂದ್ರ, ಎನ್. ಮಹಾಲಕ್ಷ್ಮಿ, ಎಚ್. ಮಾರುತಿ, ಅನ್ನಪೂರ್ಣಮ್ಮ, ರಚನಾ ಎಸ್, ಜಯಲಕ್ಷ್ಮಿ ಜಿ. ತೋಟಗೇರ, ಪ್ರಭಾರ ಪ್ರಧಾನ ವ್ಯವಸ್ಥಾಪಕ ಕೆ.ಎನ್. ಕೃಷ್ಣಯ್ಯ ಶೆಟ್ಟಿ, ಪೂರ್ಣಾವಧಿ ಸಲಹೆಗಾರ ಬಿ.ಆರ್. ನಾಗರಾಜ್ ಉಪಸ್ಥಿತರಿದ್ದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles