ವಂದೇಕರ್ನಾಟಕ ಮಾಸಿಕ ವಾರ್ಷಿಕೋತ್ಸವ: ಪತ್ರಿಕೋದ್ಯಮ ನಿಂತ ನೀರಲ್ಲ : ಶಿವಾನಂದ ತಗಡೂರು

ಬೆಂಗಳೂರು : ಪತ್ರಿಕೋದ್ಯಮ ನಿಂತ ನೀರಾಗಬಾರದು. ಅದು ಲೋಕ ಸತ್ಯಾನ್ವೇಷಣೆಗೆ ನಿರಂತರ ಚಿಲುಮೆಯಾಗಬೇಕು ಎಂದು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಭಿಪ್ರಾಯಪಟ್ಟರು.
ಶುಕ್ರವಾರಂದು ನಗರದಲ್ಲಿ ನಡೆದ ವಂದೇ ಕರ್ನಾಟಕ ದ್ವಿಭಾಷಿಕ ಮಾಸಪತ್ರಿಕೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಪತ್ರಿಕೋದ್ಯಮದ ಹಸಿವು !
ಪತ್ರಿಕಾ ಕಸಬು ಎಂದರೆ ಅದು ಹುಡುಗಾಟಿಕೆ ಅಲ್ಲ. ಪತ್ರಿಕೆಗಳನ್ನು ದೀರ್ಘಾವಧಿಗೆ ನಡೆಸುವುದೆಂದರೆ ಅದೊಂದು ಸಾಹಸ. ನೂತನ ವಿಚಾರಗಳನ್ನು ಓದುಗರಿಗೆ ತಲುಪಿಸಲು ಇಂದು ಕೇವಲ ದಿನಪತ್ರಿಕೆಗಳು ಮಾತ್ರ ಸೀಮಿತವಾಗಿಲ್ಲ. ವಾರ , ಪಾಕ್ಷಿಕ ಮತ್ತು ಮಾಸಿಕ ಪತ್ರಿಕೆಗಳೂ ಈ ದಿಶೆಯಲ್ಲಿ ಓದುಗ ಪ್ರಪಂಚಕ್ಕೆ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಿದೆ. ಈ ದಿಶೆಯಲ್ಲಿ ನಾಡಿನ ಪ್ರತಿಷ್ಟಿತ ದಿನಪ್ರತಿಕೆಗಳಲ್ಲಿ ಕೆಲಸ ಮಾಡಿದ ಅನುಭವವಿರುವ ಲಿಂಗಯ್ಯ ಬಿ. ಕಾಡದೇವರಮಠ ಅವರ ಪತ್ರಿಕೋದ್ಯಮದ ಹಸಿವು ಮೆಚ್ಚುವಂತಹದು. ಇವರ ಸಾರಥ್ಯದಲ್ಲಿ ರೂಪುಗೊಂಡಿರುವ ವಂದೇ ಕರ್ನಾಟಕ ಮಾಸಿಕ ಪತ್ರಿಕೆಯು, ಭವಿಷ್ಯದಲ್ಲಿ ವಿಭಿನ್ನ ಪ್ರಯೋಗಗಳ ಮೂಲಕ ಓದುಗ ಪ್ರಪಂಚದ ಮನಗೆಲ್ಲಲಿ ಎಂದು ತಗಡೂರು ಅವರು ಈ ಸಂಧರ್ಭದಲ್ಲಿ ಅವರು ಹಾರೈಸಿದರು.
ಬರಹದಿಂದ ಸಮಾಜಕ್ಕೆ ಒಳಿತಾಗಲಿ: ರುದ್ರಣ್ಣ ಹರ್ತಿಕೋಟೆ
ರಾಜ್ಯದ ಮಾಹಿತಿ ಹಕ್ಕು ನಿರ್ದೇಶನಾಯಲದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅವರು ಮಾತನಾಡಿ ಸಮಾಜಕ್ಕೆ ಒಳಿತಾಗುವ ಮತ್ತು ಉಪಯುಕ್ತಕರ ವಿಷಯಗಳನ್ನು ಅರ್ಥಪೂರ್ಣ ಲೇಖನ ಮತ್ತು ವಿಶ್ಲೇಷಣೆಗಳನ್ನು ಪ್ರಕಟಿಸುವ ಮೂಲಕ ವಂದೇ ಕರ್ನಾಟಕ ಮಾಸಿಕ ಪತ್ರಿಕೆಯು, ಓದುಗ ಪ್ರಪಂಚದ ಮನೆಮಾತಾಗಿ ಮಾರ್ಧನಿಸಲಿ ಎಂದು ಆಶಿಸಿದರು. ಹಿರಿಯ ಪತ್ರಕರ್ತರಾದ ಆರ್. ಪಿ. ಜಗದೀಶ್ ಅವರು ಮಾತನಾಡಿ ಮಾಸಿಕ ಪತ್ರಿಕೆ ಭವಿಷ್ಯದಲ್ಲಿ ಉತ್ತಮ ಸಂಚಿಕೆಯಾಗಿ ರೂಪುಗೊಳ್ಳಲಿ ಎಂದು ಹಾರೈಸಿದರು. ಹಿರಿಯ ಕಾಂಗ್ರೆಸ್ ಮುಖಂಡ ಎಲ್. ಆರ್. ಅನಂತ್ ಅವರೂ ಈ ಸಂದರ್ಭದಲ್ಲಿ ಮಾತನಾಡಿದರು. ಇದೇ ವೇಳೆ ಮೊದಲನೆಯ ವಾರ್ಷಿಕೋತ್ಸವ ನಿಮಿತ್ತ ವಂದೇ ಕರ್ನಾಟಕ ವಿಶೇಷ ಸಂಚಿಕೆ ಲೋಕಾರ್ಪಣೆಗೊಂಡಿತು. ಲಿಂಗಯ್ಯ ಬಿ. ಕಾಡದೇವರ ಮಠ ಸ್ವಾಗತಿಸಿದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles