ರಾಜ್ಯ ಬಿಜೆಪಿ ಕಚೇರಿ ‘ಜಗನ್ನಾಥ ಭವನ’ ಸ್ಫೋಟ ಪ್ರಕರಣ: ಶಂಕಿತ ಉಗ್ರನ ಬಂಧನ!

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನ ಮುಂಭಾಗ 2013 ರಲ್ಲಿ ನಡೆದ ಬಾಂ*ಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬ0ಧಿಸಿದ0ತೆ ಶಂಕಿತ ಉಗ್ರ ನಗೂರ್ ಅಬೂಬಕರ್ ಸಿದ್ದಿಕ್‌ನನ್ನು ತಮಿಳುನಾಡು ಪೊಲೀಸರು ಬಂಧಿಸಿರುವುದಾಗಿ ವರದಿಗಳು ತಿಳಿಸಿವೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ ಎನಲಾಗಿದ್ದು, ಈ ಬಂಧನವು 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಗ್ರನ ವಿರುದ್ಧದ ತನಿಖೆಯಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದಿಕ್‌ನ ಜೊತೆಗೆ ಆತನ ಸಹಾಯಕ ತಿರುನಲ್ವೇಲಿ ಮೊಹಮ್ಮದ್ ಅಲಿ ಸಹಾ ಬಂಧನಕ್ಕೊಳಗಾಗಿದ್ದಾನೆ ಎನ್ನಲಾಗಿದೆ.
ಆಗ 2013 ರ ಏಪ್ರಿಲ್ 17 ರಂದು ಬೆಂಗಳೂರಿನ ಮಲ್ಲೇಶ್ವರ ಬಿಜೆಪಿ ಕಚೇರಿ ಮುಂಭಾಗ ನಡೆದ ಸ್ಫೋಟದಲ್ಲಿ 16 ಜನರು ಗಾಯಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಪ್ರಕರಣದಲ್ಲಿ ನಗೂರ್ ಅಬೂಬಕರ್ ಸಿದ್ದಿಕ್ ಪ್ರಮುಖ ಶಂಕಿತನಾಗಿದ್ದ.

2011 ರಲ್ಲಿ ಮದುರೈನಲ್ಲಿ ಬಿಜೆಪಿ ಮುತ್ಸದ್ದಿ ಎಲ್.ಕೆ.ಆಡ್ವಾಣಿಯವರ ರಥಯಾತ್ರೆಯ ಮಾರ್ಗದಲ್ಲಿ ಪೈಪ್ ಬಾಂಬ್ ಇರಿಸಿದ ಯತ್ನ, 1995 ರಲ್ಲಿ ಚೆನ್ನೆನ ಚಿಂತಾದ್ರಿಪೇಟ್‌ನ ಹಿಂದೂ ಮುನ್ನಾನಿ ಕಚೇರಿಯಲ್ಲಿ ನಡೆದ ಬಾಂಬ್ ಸ್ಫೋಟ, ಮತ್ತು ನಾಗೋರ್‌ನಲ್ಲಿ ಪಾರ್ಸೆಲ್ ಬಾಂಬ್ ದಾಳಿಯಲ್ಲಿ ಹಿಂದೂ ಕಾರ್ಯಕರ್ತ ಮುತ್ತುಕೃಷ್ಣನ್‌ನ ಕೊಲೆಯೂ ಸೇರಿದಂತೆ ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿದ್ದಿಕ್ ಭಾಗಿಯಾಗಿದ್ದ ಎನ್ನಲಾಗಿದೆ.
1999 ರಲ್ಲಿ ಚೆನ್ನೆನ ಪೊಲೀಸ್ ಕಮಿಷನರ್ ಕಚೇರಿ ಸೇರಿದಂತೆ ಚೆನ್ನೆ, ತಿರುಚಿ, ಕೊಯಮತ್ತೂರು, ಮತ್ತು ಕೇರಳದ ಏಳು ಕಡೆಗಳಲ್ಲಿ ಬಾಂಬ್ ಇರಿಸಿದ ಪ್ರಕರಣದಲ್ಲಿಯೂ ಆತ ಪ್ರಮುಖ ಪಾತ್ರ ವಹಿಸಿದ್ದ. 2012 ರಲ್ಲಿ ವೆಲ್ಲೂರಿನಲ್ಲಿ ಡಾ. ಅರವಿಂದ್ ರೆಡ್ಡಿಯ ಕೊಲೆ ಪ್ರಕರಣದಲ್ಲೂ ಸಿದ್ದಿಕ್ ಶಂಕಿತನಾಗಿದ್ದ.
ತ.ನಾಡು ಪೊಲೀಸರ ವಿಶೇಷ ತಂಡವು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಈ ಬಂಧನ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ.. ಸಿದ್ದಿಕ್ ಮತ್ತು ಆತನ ಸಹಾಯಕ ಮೊಹಮ್ಮದ್ ಅಲಿ 30 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ದಕ್ಷಿಣ ಭಾರತದ ವಿವಿಧ ಭಯೋತ್ಪಾದಕ ಘಟನೆಗಳ ತನಿಖೆಗೆ ಹೊಸ ಆಯಾಮ ನೀಡಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತ.ನಾಡು ಪೊಲೀಸರ ಹೇಳಿಕೆಯಂತೆ, `ನಗೂರ್ ಅಬೂಬಕರ್ ಸಿದ್ದಿಕ್ ಮತ್ತು ತಿರುನೆಲ್ವೇಲಿ ಮೊಹಮ್ಮದ್ ಅಲಿ 1995 ರಿಂದ ತಮಿಳುನಾಡಿನಲ್ಲಿ ವಿವಿಧ ಬಾಂಬ್ ಸ್ಫೋಟಗಳು, ಧಾರ್ಮಿಕ ಘರ್ಷಣೆ, ಕೊಲೆಗಳು, ಹಿಂದೂ ನಾಯಕರುಗಳ ಕೊಲೆ ಸಂಚಿನ ಯತ್ನಗಳು ಮತ್ತು ಭಯೋತ್ಪಾದನಾ ಚಟುವಟಿಕೆಗಳಿಗೆ ಜವಾಬ್ದಾರರು. ಈ ಬಂಧನವು ಭಯೋತ್ಪಾದಕ ಜಾಲದ ಒಡೆಯುವಿಕೆಗೆ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles