ತಂಬೂರಿ ಪದ ಗಾಯಕರು ಕೇಬ್ಬೇಪುರದ ಆರ್. ಸಿದ್ಧರಾಜು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರದ ಆರ್.ಸಿದ್ಧರಾಜು ಆ ಭಾಗದಲ್ಲಿ ಹೆಸರುವಾಸಿಯಾಗಿರುವ ತಂಬೂರಿಪದ ಕಲಾವಿದರು. ಜನಪದ ಕಾವ್ಯವನ್ನು ರಾತ್ರಿಯಿಡಿ ತಂಬೂರಿ ನುಡಿಸಿಕೊಂಡು ಹಾಡುವ ಪ್ರತಿಭಾವಂತರು.

ಇವರ ತಂದೆ ದಿವಂಗತ ಕೆ.ಬಿ.ರಾಚಯ್ಯ ಕೂಡ ಜನಪದ ಹಾಡುಗಾರರಾಗಿ ಆಕಾಶವಾಣಿಯ ಎ-ಗ್ರೇಡ್ ಕಲಾವಿದರಾಗಿದ್ದರು. ಹಾಡುಗಾರಿಕೆಯನ್ನು ತಂದೆಯಿಂದ ಬಳುವಳಿಯಾಗಿ ಪಡೆದಿರುವ ಸಿದ್ಧರಾಜು ಕೂಡ ಆಕಾಶವಾಣಿ ಎ-ಗ್ರೇಡ್ ಕಲಾವಿದರು. ಕಳೆದ 42 ವರ್ಷಗಳಿಂದ ಮೃತರ ಸ್ಮರಣೆ, ಸಾಂಸ್ಕøತಿಕ ಕಾರ್ಯಕ್ರಮ, ಜಾತ್ರೆ ಉತ್ಸವಗಳಲ್ಲಿ ಜನಪದ ಕತೆ ಕಾವ್ಯಗಳನ್ನು ಹಾಡಲು ಹೋಗುತ್ತಾರೆ. 3ನೇ ತರಗತಿ ಅಷ್ಟೇ ಓದಿದ್ದರೂ ತಮ್ಮ ಮಸ್ತಕದಲ್ಲಿ ಪುಸ್ತಕಕ್ಕಿಂತಲೂ ಹೆಚ್ಚಾದ ಜನಪದ ಸಾಹಿತ್ಯ ತುಂಬಿಕೊಂಡಿದ್ದಾರೆ. ಇವರು ಸುಮಾರು 15ಕ್ಕೂ ಹೆಚ್ಚಿನ ಕತೆಗಳನ್ನು ತಾಳ ತಂಬೂರಿಗೆ ತಕ್ಕಂತೆ ಹಾಡುವರು. ಇವರು ಹಾಡಿಕೊಂಡು ಬಂದಿರುವ ಕಥೆಗಳು ಮಂಟೇಸ್ವಾಮಿ ತಂಬೂರಿ ಕಥೆ, ರಾಜ ಸತ್ಯವ್ರತ, ಬಣಜಿ ಹೊನ್ನಮ್ಮ, ದೊಡ್ಡಬಸವಣ್ಣನ ಕತೆ, ಅಣ್ಣತಂಗಿ ಕಥೆ, ನಲ್ಲತಂಗಿ ಕಥೆ, ಕುಂತಿ ಪದ, ಮುಡುಕುತೊರೆ ಮಲ್ಲಪ್ಪ, ಅರ್ಜುನ ಜೋಗಿ, ಬಾಲ್ನಾಗÀಮ್ಮ, ಮೈದಾಲರಾಮ, ನಿಂಗರಾಜಮ್ಮ. ಚೆನ್ನಿಗರಾಯ, ಕಾಳಿಂಗರಾಜನ ಕಥೆ ಪಿರಿಯಾಪಟ್ಟಣ ಕಾಳಗ.. ಹೀಗೆ ಜನಪದ ಕಥೆ ಕಾವ್ಯಗಳನ್ನು ಸುಶ್ರಾವ್ಯವಾಗಿ ಹಾಡುವುದನ್ನು ಮೈಗೂಡಿಸಿಕೊಂಡಿದ್ದಾರೆ.

ಇಷ್ಟೂ ಕಥೆ ಹಾಡುಗಳನ್ನು ಕಲಿತಿರುವುದು ಇವರ ತಂದೆಯವರಿಂದ. ಜನಪದ ಹಾಡುವಾಗ ಇವರು ತಾಳ ತಂಬೂರಿ ಡಿಕ್ಕಿ ದಂಬ್ಡಿ, ಕಂಬ್ಚಿ ಜಾರ್ಲಿ ಚಿಟಗದಾಳ ಬಳಸಿಕೊಂಡು ರಾಗತಾಳಗಳಿಗೆ ಹೊಂದಿಸಿ ಹಾಡುವರು. ಪಿ.ನಾಗರತ್ನಮ್ಮ ಮಳವಳ್ಳಿ ಇವರ ಸಂಪಾದಿತ ಮಂಟೇಸ್ವಾಮಿ ಜನಪದ ಕಾವ್ಯ ಕೃತಿಗೆ ಇವರಿಂದ ಹಾಡಿಸಿ ಹೊಸ ಕಾವ್ಯ ಸಂಗ್ರಹಿಸಿದ್ದಾರೆ. ‘ಈವರೆವಿಗೆ ಇವರು ಹಾಡಿರುವ ಕಥೆಯಲ್ಲಿ ಎಲ್ಲರೂ ಹಾಡುವ ಕತೆ ಮಾತ್ರ ಇತ್ತು. ಈಗ ಮಂಟೇಸ್ವಾಮಿಯವರ ಜೀವನಯಾತ್ರೆಯ ಪ್ರತಿಯೊಂದು ಸ್ಥಳ, ಪ್ರತಿಯೊಂದು ಜನರ ಬಗ್ಗೆ ಪದ ಕಟ್ಟಿ ಹಾಡಲಾಗಿರುತ್ತದೆ. ನಾನು ಹೊಸಕಥೆಯನ್ನು ಹೇಳುವಾಗ ಅವರಿಗೆ ತುಂಬಾ ಕುತೂಹಲ. ಅಷ್ಟೇ ಸುಶ್ರಾವ್ಯವಾಗಿ ಹಾಡಿರುತ್ತಾರೆ. ಸಿದ್ಧರಾಜುರವರ ಜೊತೆಗೆ ಹಿಮ್ಮೇಳ ಕಲಾವಿದರು ನೀಲಿಸಿದ್ದಯ್ಯ, ರಾಚಯ್ಯ ಇವರು ಸಹ ಅಷ್ಟೇ ರಾಗವಾಗಿ ಮನತುಂಬಿ ಹಾಡಿರುತ್ತಾರೆ. ನಾನು ರಚಿಸಿರುವ ಧರೆ ಕಂಡ ಧರ್ಮಗುರು ಪುಸ್ತಕದಲ್ಲಿರುವ ಸ್ಥಳ ಮಾಹಿತಿಯನ್ನು ಹೇಳಿದಾಗ ಅವರು ರಾಗ ಕಟ್ಟಿ ತಮ್ಮ ತಾಳ ತಂಬೂರಿಗೆ ತಕ್ಕಂತೆ ಹಾಡಿನ ದಾಟಿಗೆ ಹೊಂದಿಕೊಂಡಂತೆ ಕೆಲವು ಕಡೆ ಉದಾಹರಣೆಗೆ ರಾಜಕ್ಕ ಕಾಳಮ್ಮ ಇಂತ ಕಾಲ್ಪನಿಕ ಹೆಸರು ಸೇರಿಸಿಕೊಂಡು ಹಾಡಿದರು. ಇದು ನಿಜವಾಗಿಯೂ ಒಬ್ಬ ಕಲಾವಿದನ ಚತುರತೆ ಎನಿಸಿತು ಎಂದು ನಾಗರತ್ನಮ್ಮ ಶ್ಲಾಘಿಸಿದ್ದಾರೆ. ಗುಂಡ್ಲುಪೇಟೆ ಶಿಕ್ಷಕರ ಭವನದಲ್ಲಿ ದಿ.13-3-2023ರಂದು ಮಂಟೆಸ್ವಾಮಿ ಜಾನಪದ ಕಾವ್ಯ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ತಾ. ಕಸಾಪ ಮತ್ತು ತಾವು ಅಧ್ಯಕ್ಷರಾಗಿರುವ ಮಳವಳ್ಳಿ ಸುಂದ್ರಮ್ಮ ಸಾಂಸ್ಕøತಿಕ ವೇದಿಕೆಯಿಂದ ಸನ್ಮಾನಿಸಿದ್ದಾರೆ. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು ಪುತ್ತೂರು ದ.ಕ. 2016ರ ಅಕ್ಟೋಬರ್ 15,16ರಂದು ಏರ್ಪಡಿಸಿದ ಜಾನಪದ ಉತ್ಸವದಲ್ಲಿ ಕಲಾರಶ್ಮಿ ಸಮ್ಮಾನ ನೀಡಿದೆ. ಗುಂಡ್ಲುಪೇಟೆಯಲ್ಲಿ 2022ರಲ್ಲಿ ಕೆಲವು ಸಂಘಸಂಸ್ಥೆಗಳು 75ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಂಟೇಸ್ವಾಮಿ ನೀಲಗಾರ ಪ್ರಶಸ್ತಿ ನೀಡಿವೆ. ಇದೇ ವರ್ಷ ಮಂಠೆಸ್ವಾಮಿ ಮಠ ಮಳವಳ್ಳಿ ಅಡಿಹೊನ್ನಾಯನಕನಹಳ್ಳಿ ಶ್ರೀಕ್ಷೇತ್ರ ಕಪ್ಪಡಿ ಜಾತ್ರೆಯಲ್ಲಿ ಪ್ರಶಸ್ತಿ ಪತ್ರ ಸಂದಿದೆ.

ಇವರ ತಂಬೂರಿ ಪದ ಗಾಯನ ಸಾಧನೆ ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿ ಬೀದರ್‍ನ ಚನ್ನಬಸಪ್ಪ ಪಟ್ಟದೇವರ ರಂಗಮಂದಿರದಲ್ಲಿ ದಿ.15-3-2025ರಂದು 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಸಿದ್ದರಾಜುರವರೇ, ನೀವು ಈವರೆಗೆ ಎಷ್ಟು ಕಾರ್ಯಕ್ರಮ ನೀಡಿರುವಿರಿ ಎಂದು ನಾನು ಕೇಳಿದೆ. ಐದು ಸಾವಿರ ಆಗಿರಬಹುದು, ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕಬೇಕು ಎಂದರು. ಹಾಕಿ ಶುಭವಾಗಲಿ ಎಂದೆ.

ಗೊರೂರು ಅನಂತರಾಜು, ಹಾಸನ.
ಮೊ: 9449462879
ವಿಳಾಸ: ಹುಣಸಿನಕೆರೆ ಬಡಾವಣೆ, 29ನೇ ವಾರ್ಡ್, ಶ್ರೀ ಶನೀಶ್ವರ ದೇವಸ್ಥಾನ ರಸ್ತೆ, ಹಾಸನ.

 

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles