ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‌ಪೋ 1.0 ಬಾಹ್ಯಾಕಾಶದ ಕೌತುಕ

ಬೆಂಗಳೂರು, ಜುಲೈ 24: ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್‌ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವು ವಿಜ್ಞಾನಿಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ವಿಜ್ಞಾನ ಮತ್ತು ಖಗೋಳಶಾಸ್ತ್ರದಲ್ಲಿನ ಬೆಳವಣಿಗೆಗಳನ್ನು ಅನ್ವೇಷಿಸಲು ಹೊಸ ಸಾಧ್ಯತೆಯನ್ನು ಪರಿಚಯಿಸಿತು.
ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಅಸ್ಟ್ರಾನೋಮಿ ಎಕ್ಸ್‌ಪೋ 1.0 ಪ್ರದರ್ಶನದಲ್ಲಿ ಐಎನ್‌-ಸ್ಪೇಸ್‌ನ ಪ್ರಚಾರ ನಿರ್ದೇಶನಾಲಯದ ನಿರ್ದೇಶಕ ಡಾ. ವಿನೋದ್ ಕುಮಾರ್,  ಇಸ್ರೋದ ಮಾಜಿ ಮಿಷನ್ ನಿರ್ದೇಶಕ ಟಿ.ಕೆ. ಸುಂದರಮೂರ್ತಿ, ಯುಆರ್‌ಎಸ್‌ಸಿಯ ಮಾಜಿ ನಿರ್ದೇಶಕ ಎಂ.ಎಸ್. ಶ್ರೀನಿವಾಸನ್, ಮತ್ತು ಅಂತರರಾಷ್ಟ್ರೀಯ ಖಗೋಳ ಒಕ್ಕೂಟದ ಸದಸ್ಯೆ ಮತ್ತು ಖಗೋಳ ಭೌತಶಾಸ್ತ್ರಜ್ಞೆ ಡಾ. ಮಾರ್ಗರಿಟಾ ಸಫೊನೊವಾ ಸೇರಿದಂತೆ ಪ್ರಮುಖ ಬಾಹ್ಯಾಕಾಶ ತಜ್ಞರು ಭಾಗವಹಿಸಿದ್ದರು. ಮಕ್ಕಳ ಹಕ್ಕುಗಳ ಕಾರ್ಯಕರ್ತ ಮತ್ತು ಡಿಒಪಿಟಿ ಸಚಿವಾಲಯದ ಹಿಂದಿ ಸಲಹಾ ಸಮಿತಿಯ ಸದಸ್ಯ ರಾಘವೇಂಧೀರಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೈಬರಹ ತಜ್ಞ ಪ್ರೊ. ಕೆ.ಸಿ. ಜನಾರ್ದನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಅಸ್ಟ್ರಾನೋಮಿ ಎಕ್ಸ್‌ಪೋ ಲಾಂಛನ ಮತ್ತು ಅಧಿಕೃತ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ಬಾಹ್ಯಾಕಾಶ ಪರಿಶೋಧನೆ ಮತ್ತು ರಾಕೆಟ್ ತಂತ್ರಜ್ಞಾನದ ಪ್ರಮುಖ ಅಂಶಗಳ ವಿಶೇಷ ಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ರಾಘವೇಂಧೀರಾ, ತಂತ್ರಜ್ಞಾನ ಮತ್ತು ಹೊಸ ಅವಿಷ್ಕಾರಗಳ ಪರಿಣಾಮ ಇಂದು ಬಾಹ್ಯಾಕಾಶ ವಿಜ್ಞಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಅಭ್ಯಾಸ ಮಾಡಲು ಸಾಧ್ಯವಾಗಿದೆ. ಪ್ರತಿಯೊಂದು ಗ್ರಹಗಳು ಮತ್ತು ಸೌರಮಂಡಲದ ಅಧ್ಯಯನಕ್ಕೆ ಇದು ನೆರವಾಗಿದೆ. ಅಸ್ಟ್ರಾನೋಮಿ ಎಕ್ಸ್‌ಪೋ ಮೂಲಕ ಮಕ್ಕಳಿಗೆ ಬಾಹ್ಯಾಕಾಶದ ಕುರಿತು ಹೆಚ್ಚಿನ ಅರಿವು ಮೂಡಿಸಲು ಸಾಧ್ಯವಾಗುತ್ತಿದೆ. ಜತೆಗೆ, ಭಾರತ ಪ್ರಸ್ತುತ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಜಗತ್ತಿನಲ್ಲಿಯೇ ನಾಲ್ಕನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಏರುವಂತಾಗಲಿ ಎಂದು ಹಾರೈಸಿದರು.
ಇಸ್ರೋ ವಿಜ್ಞಾನಿ ಇಳಂಗೋವನ್ ಅವರೊಂದಿಗಿನ ನೇರ ವರ್ಚುವಲ್ ಸಂವಾದವು ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ತಜ್ಞರೊಂದಿಗೆ ನೇರವಾಗಿ ತೊಡಗಿಸಿಕೊಳ್ಳಲು ಅವಕಾಶವನ್ನು ಒದಗಿಸಿತು. ಇದೇ ಸಂದರ್ಭದಲ್ಲಿ ಖಗೋಳ ಭೌತಶಾಸ್ತ್ರ, ಇಸ್ರೋ ಇತಿಹಾಸ ಮತ್ತು ಡಾಲ್ಬಿ ಅಟ್ಮಾಸ್ ಸ್ವರೂಪದಲ್ಲಿ ಪ್ರಸ್ತುತಪಡಿಸಲಾದ 3D ವಿಶೇಷ ಚಿತ್ರ ಪ್ರದರ್ಶಿಸಲಾಯಿತು. ಇದು ಕಾಸ್ಮಿಕ್ ವಿದ್ಯಮಾನಗಳು ಮತ್ತು ಬಾಹ್ಯಾಕಾಶ ವಾಸಸ್ಥಳದ ಭವಿಷ್ಯದ ಸಾಧ್ಯತೆಗಳನ್ನು ಪರಿಚಯಿಸುವ ಪ್ರಯತ್ನವನ್ನು ಮಾಡಿತು. ಜತೆಗೆ, ಭೂಮಿಯ ರಚನೆ ಹೇಗಾಯಿತು ಮತ್ತು ಮಾನವಿನ ವಿಕಾಸದ ಪರಿಕಲ್ಪನೆಯನನ್ನು 3Dಯಲ್ಲಿ ಪ್ರದರ್ಶಿಸಿದ್ದು, ಮಕ್ಕಳಿಗೆ ಹೊಸ ಲೋಕವೊಂದನ್ನು ಪರಿಚಯಿಸಿತು. ಜತೆಗೆ ಬಾಹ್ಯಾಕಾಶ ಮತ್ತು ವಿಜ್ಞಾನದ ಬಗೆಗಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿತು.
ಈ ಕಾರ್ಯಕ್ರಮವು ಇಸ್ರೋ ಮಾರ್ಗದರ್ಶಕರಿಂದ ಮಾರ್ಗದರ್ಶನ ಪಡೆದ ಭಾರತದ ಮೊದಲ ಶೈಕ್ಷಣಿಕ ರಾಕೆಟ್ ತಂತ್ರಜ್ಞಾನ ಪ್ರಯೋಗಾಲಯ ಎಂದು ವಿವರಿಸಲಾದ ಆರ್ಯಭಟ ಶೈಕ್ಷಣಿಕ ರಾಕೆಟ್ ಪ್ರಯೋಗಾಲಯದ ಉದ್ಘಾಟನೆ ನಡೆಯಿತು. ವಿವಿಧ ಹಂತಗಳಲ್ಲಿರುವ ವಿದ್ಯಾರ್ಥಿಗಳಿಗೆ ಸ್ಮಾರ್ಟ್, ಅನುಭವಿ STEM ಕಲಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿರುವ ವಿದ್ಯಾರ್ಥಿ ಬಾಹ್ಯಾಕಾಶ ಕಲಿಕಾ ಅಪ್ಲಿಕೇಶನ್ ಅನ್ನು ಅನಾವರಣಗೊಳಿಸಲಾಯಿತು.
ಇನ್ನೋನೆಕ್ಸ್ಟ್- ಏರಿಯನ್ ಭಾರತ್ ಸಿಇಒ ರಶ್ಮಿ ಸುಮಂತ್ ಮತ್ತು ಪ್ರಾದೇಶಿಕ ಸಂಯೋಜಕ ಸಂದೀಪ್ ಸೇರಿದಂತೆ ಏರಿಯೋನ್ ಭಾರತ್‌ನ ಪ್ರತಿನಿಧಿಗಳು, ತಳಮಟ್ಟದಲ್ಲಿ ಬಾಹ್ಯಾಕಾಶ ಶಿಕ್ಷಣವನ್ನು ಉತ್ತೇಜಿಸುವಲ್ಲಿ ನಡೆಯುತ್ತಿರುವ ವಿವಿಧ ಪ್ರಯತ್ನಗಳನ್ನು ಉದ್ದೇಶಿಸಿ ಮಾತನಾಡಿದರು. ಜತೆಗೆ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಖಗೋಳಶಾಸ್ತ್ರದ ಪ್ರಸ್ತುತತೆಯ ಕುರಿತು ಗಣ್ಯರು ತಮ್ಮ ದೃಷ್ಟಿಕೋನಗಳನ್ನು ಹಂಚಿಕೊಂಡರು.
150 ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಪ್ರಾಂಶುಪಾಲರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles