ಸಾಹಿತ್ಯ ಲೋಕದ ಅಪರೂಪದ ಹಾಗೂ ಜನಪ್ರಿಯವಾದ ಹೆಸರು ಟಿ ಪಿ ಕೈಲಾಸಂ.

ಚಾಮರಾಜನಗರ: ಕನ್ನಡ ಸಾಹಿತ್ಯ ಲೋಕದ ಅಪರೂಪದ ಹಾಗೂ ಜನಪ್ರಿಯವಾದ ಹೆಸರು ಟಿ ಪಿ ಕೈಲಾಸಂ. ಕನ್ನಡಕೊಬ್ಬನೆ ಕೈಲಾಸಂ ಕನ್ನಡಿಗರ ಹೆಮ್ಮೆಯೆಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಟಿಪಿ ಕೈಲಾಸಂ ಕೊಡುಗೆಗಳ ಕುರಿತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ಕೈಲಾಸಂ ರವರ ನಾಟಕ ಮತ್ತು ಕವನಗಳ ರಚನೆ ವಿಶೇಷವಾದ ಕನ್ನಡ ಸಾಹಿತ್ಯದ ಅಮೂಲ್ಯ ಸಂಪತ್ತು. ಅವರ ನಾಟಕಗಳಲ್ಲಿ ವಿಡಂಬನೆ ,ಹಾಸ್ಯ ಹಾಗೂ ಮೌಲ್ಯಗಳ ಸಮಗ್ರ ಚಿಂತನೆ ಅಡಗಿದೆ. ಅವರ ಕವನಗಳು ಹಾಗೂ ನಾಟಕಗಳ ರಚನೆ ಕನ್ನಡ ಭಾಷಾ ಪ್ರಯೋಗದ ಹೊಸತನವಾಗಿದೆ. ಕೇಳಲು ಆಕರ್ಷಕವಾಗಿರುವ ಭಾಷೆ, ಹೆಸರುಗಳು ಅದರ ವಿಶೇಷವಾದ ಅರ್ಥಗಳು ,ಕನ್ನಡಿಗರ ಅಮೂಲ್ಯ ಆಸ್ತಿ. ಜಾರ್ಜ್ ಬರ್ನಾಡ್ ಷಾ ನಾಟಕಗಳಿಂದ ಪ್ರಭಾವಿತರಾಗಿ ಅದೇ ರೀತಿಯ ನಾಟಕ ರಚನೆಯನ್ನು ರಚಿಸಿದವರು . ಕಾನ್ಸ್ಟಂಟಿ ನೋಪಲ್ ಕವನವನ್ನು ಇಂಗ್ಲೀಷ್ ಸಂಗೀತಗಾರ ಹೊಸ ರಾಗದಲ್ಲಿ ಹಾಡಿದ್ದನ್ನು ಸವಾಲಾಗಿ ಸ್ವೀಕರಿಸಿ ಅದೇ ರಾಗದಲ್ಲಿ ಕೋಳಿಕೆ ರಂಗ ಹಾಡು ರಚಿಸಿ ಇಡೀ ಜಗತ್ತಿಗೆ ಕನ್ನಡ ಸಾಹಿತ್ಯದ ಹೊಸತನವನ್ನು ನೀಡಿ ನಿಬ್ಬೆರಗಾಗುವಂತೆ ಮಾಡಿದ ಕೈಲಾಸಂ ರವರ ಪ್ರತಿ ಸಾಹಿತ್ಯ ನಿರ್ಮಲವಾದ, ಹೃದಯಪೂರ್ವಕವಾದ ಅವರ ಹಾಸ್ಯ ಮನಸ್ಸಿಗೆ ಮುದ ನೀಡುತ್ತದೆ ಎಂದು ತಿಳಿಸಿದರು .

ಕೈಲಾಸಂರವರ ನಾಟಕಗಳಾದ ಟೊಳ್ಳುಗಟ್ಟಿ, ಬಹಿಷ್ಕಾರ ,ನಮ್ ಬ್ರಾಹ್ಮಣಿಕೆ, ಅಮ್ಮಾವ್ರ ಗಂಡ ,ಪೋಲಿ ಕಿಟ್ಟಿ, ವೈದ್ಯನ ವ್ಯಾದಿ ,ಹಾಗೆಯೇ ಕವನ ಸಂಕಲನಗಳಾದ ತಿಪ್ಪಾರಳ್ಳಿ, ಕೋಳಿಕೆ ರಂಗ, ನಂಜಿ ನನ್ನ ಅಪರಂಜಿ, ಕಾಶಿಗೆ ಹೋದ ನಮ್ ಭಾವ, ಬೋರನ ಬಾರ ಕನ್ನಡಿಗರ ಮನೆ ಮಾತಾಗಿದೆ ಎಂದರು.

ಬರಹಗಾರ ಎಸ್ ಲಕ್ಷ್ಮಿ ನರಸಿಂಹ ಕೈಲಾಸಂ ಬಗ್ಗೆ ಮಾತನಾಡಿ ಹಾಸ್ಯ ವಿಡಂಬನೆಯ ಮೂಲಕ ಸದಾ ಕಾಲ ನೆನೆಸಿಕೊಳ್ಳುವ ಕರ್ನಾಟಕ ಪ್ರಹಸನ ಪಿತಾಮಹರಾಗಿ ರಂಗಭೂಮಿಗೆ ಅಪಾರ ಕೊಡುಗೆಯನ್ನು ನೀಡಿದವರು. ಉನ್ನತ ಶಿಕ್ಷಣ ಪಡೆದ ಕೈಲಾಸಂ ರವರು ಉತ್ತಮ ಜ್ಞಾನಿಗಳು .ಕ್ರೀಡಾಪಟುಗಳು ಆಗಿದ್ದವರು. ಕನ್ನಡ ಸಾಹಿತ್ಯ ಲೋಕಕ್ಕೆ ಕೈಲಾಸಂ ರವರ ಸಾಹಿತ್ಯದ ನುಡಿಗಳು ಕನ್ನಡದ ನೋಡಿ ಮುತ್ತುಗಳಾಗಿ ಇದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬಿಕೆ ಆರಾಧ್ಯ, ಶಿವಲಿಂಗ ಮೂರ್ತಿ, ಮಹೇಶ್ ಗೌಡ ,ಪರಶಿವಪ್ಪ, ಮಂಜುನಾಥ್, ಮಾದೇವ ಶೆಟ್ಟಿ, ಲೋಕೇಶ್ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

Hot this week

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

Topics

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles