ಹಿರಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ ‘ನುಡಿ ನಮನ’

ಬೆಂಗಳೂರು : ಇತ್ತೀಚೆಗೆ ನಿಧನರಾದ ನಾಡಿನ ಹೆಮ್ಮೆಯ ಹಿರಿಯ ಚಿತ್ರಕಲಾವಿದ ಕೆ.ಟಿ.ಶಿವಪ್ರಸಾದ್ (K.T.ShivaPrasad) ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿಯ (Lalithakala Academy) ವತಿಯಿಂದ ಜುಲೈ 19 ರಂದು ಬೆಳಿಗ್ಗೆ 11:00 ಗಂಟೆಗೆ ಬೆಂಗಳೂರಿನ ಕಸ್ತೂರಿ ಬಾ ರಸ್ತೆಯಲ್ಲಿರುವ ವೆಂಕಟಪ್ಪ ಆರ್ಟ್ ಗ್ಯಾಲರಿಯಲ್ಲಿ “ನುಡಿ ನಮನ” (Nudinamana) ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಗೌರವ ಸಮರ್ಪಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹಿರಿಯ ಕಲಾವಿದರಾದ ಕೆ.ಟಿ.ಶಿವಪ್ರಸಾದ್ ಅವರು ಜೂನ್ 30, 2026ರಂದು ನಿಧನರಾಗಿದ್ದರು. ನಿರಂತರ ಕಲಾ ಆರಾಧಕರಾಗಿದ್ದ ಶ್ರೀಯುತರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹಲವಾರು ಕಲಾ ಪ್ರದರ್ಶನಗಳನ್ನು ಏರ್ಪಡಿಸುವ ಮೂಲಕ ಕಲಾ ಕ್ಷೇತ್ರಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ್ದಾರೆ.
ತಮ್ಮದೇ ಆದ ವಿಶಿಷ್ಟ ಕಲಾಶೈಲಿಯನ್ನು ರೂಢಿಸಿಕೊಂಡಿದ್ದ ಅವರು, ಕರ್ನಾಟಕ ಲಲಿತಕಲಾ ಅಕಾಡೆಮಿಯ ಗೌರವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪ್ರತಿಷ್ಠಿತ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಸೇರಿದಂತೆ ಹಲವು ಪ್ರಮುಖ ಗೌರವಗಳಿಗೆ ಪಾತ್ರರಾಗಿದ್ದರು. ಕರ್ನಾಟಕ ಲಲಿತಕಲಾ ಅಕಾಡೆಮಿ ಆಯೋಜಿಸಿರುವ ಈ ವಿಶೇಷ “ನುಡಿ ನಮನ” ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಹಾಗೂ ಯುವ ಚಿತ್ರಕಲಾವಿದರು ಮತ್ತು ಸಾಹಿತ್ಯ ಕ್ಷೇತ್ರದ ಪ್ರಮುಖ ಲೇಖಕರು ಭಾಗವಹಿಸಿ, ದಿವಂಗತ ಶಿವಪ್ರಸಾದ್ ಅವರೊಂದಿಗಿನ ಒಡನಾಟ ಹಾಗೂ ಕಲಾ ಲೋಕಕ್ಕೆ ಅವರ ಕೊಡುಗೆಯನ್ನು ಸ್ಮರಿಸಲಿದ್ದಾರೆ.
ಕಲಾ ಆಸಕ್ತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles