*ಶಾಸಕ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರಿಗೆ ಅಹಿಂದ ಕೋಟಾದಲ್ಲಿ ಸಚಿವ ಸ್ಥಾನ(Ministerial post) ನೀಡುವಂತೆ ಜಮೀರ್ ಮುಖವಾಡ ಧರಿಸಿ ವಿನೂತನ ಪ್ರತಿಭಟನೆ*
ಬೆಂಗಳೂರು, ಜುಲೈ 4: ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಶಾಸಕ ಬಿ.ಜೆಡ್.ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ(in the cabinet) ಅಹಿಂದ ಕೋಟಾದಡಿ ಸಚಿವ ಸ್ಥಾನ(Ministerial post) ನೀಡಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಮೀರ್ ಅವರ ಮುಖವಾಡ ಧರಿಸಿ ದಲಿತ ನಾಯಕರು ಗಮನ ಸೆಳೆದರು. ಪ್ರೆಸ್ ಕ್ಲಬ್(Press club) ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ(In the press conference) ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ N.ಶಂಕರ್, G.ಮದಿಯರಸನ್ ಹಾಗೂ ದಲಿತ ಸಮುದಾಯದ ಮುಖಂಡರು ಜಮೀರ್ ಖಾನ್ ಅವರಿಗೆ ಅಖಂಡ(Unwavering)ಬೆಂಬಲ ವ್ಯಕ್ತಪಡಿಸಿದರು.
ರಾಜ್ಯ ಸಂಚಾಲಕ N.ಶಂಕರ್ ಮಾತನಾಡಿ, ಶಾಸಕ B.J.ಜಮೀರ್ ಅಹಮದ್ ಖಾನ್ ಬಡವರ ಪರವಾಗಿ ನಿರಂತರವಾಗಿ ಕೆಲಸ ಮಾಡಿರುವ ಜನನಾಯಕರು. ಜಾತಿ, ಧರ್ಮ ಭೇದವಿಲ್ಲದೇ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲ ಸಮುದಾಯಗಳ ಜನರ ವಿಶ್ವಾಸ ಹಾಗೂ ಪ್ರೀತಿಯನ್ನು ಅವರು ಗಳಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದ ವೇಳೆ ಸಹಸ್ರಾರು ಬಡ ಕುಟುಂಬಗಳಿಗೆ ಸೂರು(roof) ಕಲ್ಪಿಸುವ ಮೂಲಕ ಜನಪರ ಆಡಳಿತ ನೀಡಿದ್ದರು. ಅವರ ಅನುಭವ ಹಾಗೂ ಜನಸೇವೆಯನ್ನು ಪರಿಗಣಿಸಿ ಮತ್ತೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದ ವೇಳೆ ಸಹಸ್ರಾರು ಬಡ ಕುಟುಂಬಗಳಿಗೆ ಸೂರು(roof) ಕಲ್ಪಿಸುವ ಮೂಲಕ ಜನಪರ ಆಡಳಿತ ನೀಡಿದ್ದರು. ಅವರ ಅನುಭವ ಹಾಗೂ ಜನಸೇವೆಯನ್ನು ಪರಿಗಣಿಸಿ ಮತ್ತೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ಈ ಹಿನ್ನೆಲೆಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ KPCC ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಅಹಿಂದ ವರ್ಗದ ಜನಸಂಖ್ಯೆ ಗಣನೀಯ(Significant) ಪ್ರಮಾಣದಲ್ಲಿದ್ದು, ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಅಹಿಂದ ಸಮುದಾಯಕ್ಕೆ ಮತ್ತಷ್ಟು ಬಲ ದೊರೆಯಲಿದೆ. ಜೊತೆಗೆ ಪ್ರಾತಿನಿಧ್ಯ ದೊರೆಯುವುದರ ಜೊತೆಗೆ ಕಾಂಗ್ರೆಸ್ ಪಕ್ಷಕ್ಕೂ ರಾಜಕೀಯವಾಗಿ ಅನುಕೂಲವಾಗಲಿದೆ ಎಂದು ಸಮಿತಿಯ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಶಾಸಕ ಬಿ.ಜೆ.ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಮುಖವಾಡ ಧರಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಎನ್.ಶಂಕರ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

