ವಿಪ್ರರು ಇನ್ನುಮುಂದೆ ‘ಕಿಂಗ್‌’ಗಳಾಗಬೇಕು – ಶಾಸಕ ಸಿ.ಕೆ. ರಾಮಮೂರ್ತಿ

ಬೆಂಗಳೂರು: ದೇಶಕಟ್ಟುವಲ್ಲಿ ಅಪಾರ ಕೊಡುಗೆ ನೀಡಿರುವ ಮತ್ತು ತಮ್ಮ ಏಳಿಗೆ ಲೆಕ್ಕಿಸದೆ ತಮ್ಮನ್ನು ನಂಬಿದವರ ಸರ್ವತೋಮುಖ ಏಳಿಗೆಗೆ ಅಹರ್ನಿಷ ದುಡಿಯುವ ಸ್ವಾಭಿಮಾನಿ (Vipras) ವಿಪ್ರರು, ಇನ್ನು ಮುಂದೆ ಕೇವಲ ‘ಕಿಂಗ್‌ಮೇಕರ್‌’ (King Maker) ಆಗಿ ಉಳಿಯದೆ ‘ಕಿಂಗ್‌’ಗಳಾಗಬೇಕು ಎಂದು ಜಯನಗರ ವಿಧಾನಸಭಾಕ್ಷೇತ್ರದ ಶಾಸಕರಾದ ಸಿ.ಕೆ. ರಾಮಮೂರ್ತಿ (C.K.Ramamurthy) ಅವರು ಮಹತ್ವದ ಕರೆ ನೀಡಿದರು.

ಬೆಂಗಳೂರಿನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಗಾಯತ್ರಿ ಭವನದಲ್ಲಿ, ವಿಪ್ರ ಸಮಾಜದ ರಾಜಕೀಯ ಆಸಕ್ತ ಅಭ್ಯರ್ಥಿಗಳಿಗೆ ಹಮ್ಮಿಕೊಂಡ ‘ರಾಜತಂತ್ರ’ ಎನ್ನುವ ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಬ್ರಾಹ್ಮಣ ರಾಜಕೀಯ ವೇದಿಕೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ವಿಕಾಸ ಸಮಾನ ಮನಸ್ಕ ಮಾಧ್ಯಮ ಪ್ರತಿನಿಧಿಗಳ ಸಂಘಟನೆ ಜಂಟಿಯಾಗಿ ಈ ಕಾರ್ಯಾಗಾರವನ್ನು ಆಯೋಜಿಸಿದ್ದವು. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಸುಮಾರು 70ಕ್ಕೂ ಹೆಚ್ಚು ಮಂದಿ ರಾಜಕೀಯ ಆಸಕ್ತರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಮೂಲಭೂತ ಕರ್ತವ್ಯ, ಜವಾಬ್ದಾರಿ, ಜನರ ಮಧ್ಯೆ ತಮ್ಮನ್ನು ಗುರುತಿಸಿಕೊಳ್ಳುವುದು, ಮತ್ತು ಸಮಾಜಮುಖಿಯಾಗಿ ಇರುವುದು ಹೇಗೆ ಎಂಬುದರ ಕುರಿತು ಕಾರ್ಯಾಗಾರದಲ್ಲಿ ತಿಳಿಸಿಕೊಡಲಾಯಿತು. ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ಜನಪರ ಕಾರ್ಯಗಳನ್ನು ಮಾಡುವ ಹಾಗೂ ಸದ್ಗುಣ ರಾಜಕಾರಣಿಯೆಂದು ಗುರುತಿಸಿಕೊಳ್ಳುವ ನಿಟ್ಟಿನಲ್ಲಿ, ರಾಜಕೀಯದ ಆಳವಾದ ಅಧ್ಯಯನ ಮತ್ತು ‘ಹೋಮ್‌ವರ್ಕ್’ ಮಾದರಿಯ ಯೋಜನೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಶ್ರೀ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದರು.

ಗೋಷ್ಠಿಗಳಲ್ಲಿ ಗಣ್ಯರ ಅಭಿಪ್ರಾಯಗಳು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತ್ತು ಪ್ರಮುಖ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾದ ಶ್ರೀ ಎಸ್. ದತ್ತಾತ್ರಿ ಅವರು “ಸಾಮಾಜಿಕ ಸಮಸ್ಯೆಗಳು ಮತ್ತು ರಾಜಕೀಯದ ಪರಿಣಾಮಗಳು” ಎನ್ನುವ ವಿಷಯದ ಕುರಿತು ಮಾತನಾಡಿದರು. ರಾಜಕೀಯಕ್ಕೆ ಬರುವ ಪ್ರತಿಯೊಬ್ಬರೂ ಯಾವುದೇ ಸಂಕೋಚವಿಲ್ಲದೆ ಜನಸೇವೆಯಲ್ಲಿ ತೊಡಗಿಕೊಳ್ಳಬೇಕು. ಸಮಾಜದಲ್ಲಿ ಇರುವ ಸಾರ್ವತ್ರಿಕ ಸಮಸ್ಯೆಯೇ ಆಗಲಿ, ಖಾಸಗಿ ಸಮಸ್ಯೆಗಳೇ ಆಗಲಿ ಸೂಕ್ತವಾಗಿ ಸ್ಪಂದಿಸುವ ಸೂಕ್ಷ್ಮಮತಿತ್ವವನ್ನು ಹೊಂದಿರಬೇಕು. ಜನಪರ ಕೆಲಸಗಳ ಮೂಲಕ ತಮ್ಮ ಕ್ಷೇತ್ರದ ಜನರ ಮನಸನ್ನು ಗೆಲ್ಲುವ ಕೆಲಸ ಮಾಡಬೇಕಿದೆ. ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆ ಪರಿಹಾರಕ್ಕೂ ಮುಂದಾಗಬೇಕು. ಹಾಗೆ ಮಾಡಿದಾಗ ಮಾತ್ರ ರಾಜಕೀಯವಾಗಿ ಗಟ್ಟಿಯಾಗಿ ಜನರ ಮಧ್ಯ ನಿಲ್ಲುವುದಕ್ಕೆ ಸಾಧ್ಯ ಎಂದು ಅವರು ಹೇಳಿದರು.

ಹಿರಿಯ ಪತ್ರಕರ್ತ ಹಾಗೂ ನೋಬ್ಲಿ ಕ್ರೀಮ್ ಸಂಸ್ಥೆಯ ಪ್ರಾಜೆಕ್ಟ್‌ ಮ್ಯಾನೇಜರ್ ಶ್ರೀನಾಥ್‌ ಜೋಶಿ ಅವರು “ರಾಜಕೀಯದಲ್ಲಿ ಡಿಜಿಟಲ್ ತಂತ್ರಜ್ಞಾನದ ಬಳಕೆ” ಎನ್ನುವ ವಿಷಯದಲ್ಲಿ ಮಾತನಾಡಿದರು. ರಾಜಕಾರಣಿಯಾಗುವುದಕ್ಕೆ ಮುಂದಾದವರು ಸದಾ ತೆರೆದ ಪುಸ್ತಕದಂತೆ ಇರಬೇಕು, ಅವರ ಪ್ರತಿ ಹೆಜ್ಜೆಯೂ ಜನರಿಗೆ ತಿಳಿಯುವಂತಿರಬೇಕು. ಸಾಮಾಜಿಕ ಮಾಧ್ಯಮಗಳನ್ನು ಬಳಸುವ ಮೂಲಕ ತಮ್ಮ ಪ್ರಚಾರವನ್ನು ಸೂಕ್ತ ರೀತಿಯಲ್ಲಿ ಮಾಡಿಕೊಳ್ಳಬಹುದು. ಇಂದು ನಾವು ವಿದೇಶಿ ಸಾಮಾಜಿಕ ಜಾಲತಾಣಗಳನ್ನು ನಂಬಿದ್ದೇವೆ ಮತ್ತು ಆ ಮೂಲಕ ನಮ್ಮ ಪ್ರಚಾರಗಳನ್ನು ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಅದೇ ಪ್ರಮಾಣದಲ್ಲಿ ಸಾಮಾಜಿಕ ಜಾಲಗಳಲ್ಲಿ ಫೇಕ್ ಸುದ್ದಿಗಳ ಹಾವಳಿ ತಪ್ಪಿಸಿಕೊಳ್ಳುವುದು ಅತ್ಯಗತ್ಯ. ಇದಕ್ಕಾಗಿ ನೋಬ್ಲಿ ಕ್ರಿಮ್‌ನಂತಹ ಸ್ವದೇಶಿ ತಂತ್ರಜ್ಞಾನವನ್ನು ಬಳಸುವ ಮೂಲಕ ಎಲ್ಲಾ ಸೋಶಿಯಲ್ ಮೀಡಿಯಾಗಳನ್ನು ಯಾವ ರೀತಿಯಲ್ಲಿ ಬಳಸಿಕೊಳ್ಳಬೇಕು ಎನ್ನುವ ಮಾಹಿತಿಯನ್ನು ಅವರು ನೀಡಿದರು.

ಬ್ರಾಹ್ಮಣ ರಾಜಕೀಯ ವೇದಿಕೆಯ ಅಧ್ಯಕ್ಷರಾದ ಶ್ರೀ ವಿ. ರಾಘವೇಂದ್ರ ಮಯ್ಯ ಅವರು ಮಾತನಾಡಿ, ನಮ್ಮ ನಾಯಕರು ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯವನ್ನು ಸಮದೃಷ್ಟಿಯಲ್ಲಿ ಇರಿಸಿಕೊಂಡು ಹೊರಬರಬೇಕಿದೆ. ವಿಪ್ರ ಸಮಾಜದ ಅಭ್ಯರ್ಥಿಗಳು ಯಾವುದೇ ಪಕ್ಷದಿಂದ ಚುನಾವಣಾ ಕಣಕ್ಕೆ ಇಳಿದರೂ ನಮ್ಮ ಸಮುದಾಯದವರು ಪಕ್ಷಬೇಧ ಮರೆತು ಬೆಂಬಲಿಸಬೇಕಿದೆ. ಬ್ರಾಹ್ಮಣ ನಿರ್ಣಾಯಕ ಮತಗಳಿರುವ ಕ್ಷೇತ್ರಗಳಲ್ಲಿ ಬ್ರಾಹ್ಮಣ ಅಭ್ಯರ್ಥಿಗಳಿಗೆ ಅವಕಾಶ ನೀಡುವಂತೆ ಒತ್ತಡ ತರಲಾಗುವುದು ಎನ್ನುವ ಭರವಸೆ ನೀಡಿದರು. ಇದೇ ವೇಳೆ, ಕಾಂಗ್ರೆಸ್ ವಕ್ತಾರೆ ಸ್ವಾತಿ ಚಂದ್ರಶೇಖರ ಮಾತನಾಡಿ, ಪಕ್ಷ ಮತ್ತು ಸಮುದಾಯ ಎರಡು ನಮ್ಮ ಮುಂದೆ ಬಂದಾಗ ಸಮುದಾಯವನ್ನೇ ಆಯ್ಕೆ ಮಾಡಿಕೊಳ್ಳಬೇಕು, ಜಾತಿ ವಿಷಯ ಬಿಟ್ಟು ಇಂದು ರಾಜಕೀಯ ನಡೆಯುವುದೇ ಇಲ್ಲ ಎಂದು ಅಭಿಪ್ರಾಯಪಟ್ಟರು. ಶ್ರೀಮತಿ ಸತ್ಯವಾಣಿ ಅವರು ಮಾತನಾಡಿ, ತಮ್ಮ ಕ್ಷೇತ್ರದಲ್ಲಿರುವ ಸಮಸ್ಯೆಗಳಿಗೆ ನಿರಂತರ ಸ್ಪಂದಿಸುತ್ತಾ ನ್ಯಾಯಾಲಯದ ಮೆಟ್ಟಿಲು ಏರುವ ಮೂಲಕ ಕೆರೆ ಮತ್ತು ರಾಜಕಾಲುವೆಗಳ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿ ಜನರ ಬಳಕೆಗೆ ಯೋಗ್ಯವಾಗಿಸಿದ್ದ ಕುರಿತು ತಮ್ಮ ಅನುಭವ ಹಂಚಿಕೊಂಡರು.
ರಾಜಕೀಯ ವಿಶ್ಲೇಷಕ ಹಾಗೂ ರಾಜಕೀಯ ತರಬೇತುದಾರ ಶ್ರೀ ಸುಧೀಂದ್ರ ದೇಶಪಾಂಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜಕೀಯಕ್ಕೆ ಬರುವವರಿಗೆ ಅಧ್ಯಯನ ಮತ್ತು ದೂರದೃಷ್ಟಿತ್ವ ಇರಬೇಕು ಎನ್ನುತ್ತಾ, ತರಬೇತಿಗೆ ಹಾಜರಾದವರೊಂದಿಗೆ ಸಂವಾದ ನಡೆಸುತ್ತಾ, ಮುಂದಿನ ದಿನಗಳಲ್ಲಿ ಚುನಾವಣೆಗೆ ಯಾವ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವ ಮಹತ್ವದ ಮಾಹಿತಿ ನೀಡಿದರು.
ಲಕ್ಷ್ಮಿಶ್ರೀ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಾಗಾರವನ್ನು, ವಿಕಾಸದ ಪ್ರಧಾನ ಕಾರ್ಯದರ್ಶಿ ಶ್ರೀ ಹನುಮೇಶ ಯಾವಗಲ್‌ ಅವರು ಯಶಸ್ವಿಯಾಗಿ ನಡೆಸಿಕೊಟ್ಟರು. ಅಂತಿಮವಾಗಿ, ಮುಂಬರುವ ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ದೃಷ್ಟಿಯಿಂದ, ವಿಪ್ರ ಅಭ್ಯರ್ಥಿಗಳು ಯಾವೆಲ್ಲಾ ಕ್ಷೇತ್ರದಲ್ಲಿ ಕಣಕ್ಕಿಳಿಸಬೇಕು, ಅವರನ್ನು ಗೆಲ್ಲಿಸಿಕೊಂಡು ಬರುವುದಕ್ಕೆ ಏನೆಲ್ಲಾ ತಂತ್ರಗಾರಿಕೆ ರಚಿಸಬೇಕು, ಮತ್ತು ಅಭ್ಯರ್ಥಿಗಳು ಏನೆಲ್ಲಾ ‘ಹೋಮ್‌ವರ್ಕ್‌’ ಮಾಡಬೇಕು ಎನ್ನುವ ಮಹತ್ವದ ನಿರ್ಣಯಗಳನ್ನು ಈ ಕಾರ್ಯಾಗಾರದಲ್ಲಿ ಕೈಗೆತ್ತಿಕೊಳ್ಳಲಾಯಿತು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles