ಲೀಡ್ಸ್​ನಲ್ಲಿ ಭಾರತ​ ಗೆದ್ದಿದ್ದೆಷ್ಟು? ಇಲ್ಲಿ ಯಾರು ಬಲಿಷ್ಠ​?

ಭಾರತ-ಇಂಗ್ಲೆಂಡ್ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಪಂದ್ಯ ಇಂದು ಶುರುವಾಗಲಿದೆ. ಇದರೊಂದಿಗೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ 2025-2027ರ ಋತು ಕೂಡಾ ಪ್ರಾರಂಭವಾಗುತ್ತದೆ. ಉಭಯ ತಂಡಗಳ ನಡುವಿನ ಮಹತ್ವದ ಹಣಾಹಣಿಗೆ ಲೀಡ್ಸ್‌ನ ಹೆಡಿಂಗ್ಲಿ ಮೈದಾನ ಆತಿಥ್ಯ ವಹಿಸಿದೆ.

ಭಾರತ ಕೊನೆಯ ಬಾರಿಗೆ 2007ರಲ್ಲಿ ರಾಹುಲ್​ ದ್ರಾವಿಡ್​ ನಾಯಕತ್ವದಲ್ಲಿ ಇಂಗ್ಲೆಂಡ್​ ನೆಲದಲ್ಲಿ ಟೆಸ್ಟ್​ ಸರಣಿ ಜಯಿಸಿತ್ತು. ಆ ಬಳಿಕ ಒಮ್ಮೆಯೂ ಸರಣಿ ಗೆಲ್ಲಲು ಸಾಧ್ಯವಾಗಿಲ್ಲ. ಇದೀಗ ಗಿಲ್​ ನಾಯಕತ್ವದಲ್ಲಿ ಟೆಸ್ಟ್ ಸರಣಿ ಗೆಲ್ಲಲು ತವಕಿಸುತ್ತಿದೆ.

ಲೀಡ್ಸ್​ ಮೈದಾನದಲ್ಲಿ ಉಭಯ​ ತಂಡಗಳ ದಾಖಲೆ ಹೇಗಿದೆ?. ಇಲ್ಲಿ ಇದುವರೆಗೂ ಆಡಿರುವ ​ಪಂದ್ಯಗಳೆಷ್ಟು? ಯಾರು ಹೆಚ್ಚು ಗೆಲುವು ಸಾಧಿಸಿದ್ದಾರೆ? ಎಂಬುದನ್ನು ಈಗ ತಿಳಿಯೋಣ.

ಹೆಡಿಂಗ್ಲೆ ಮೈದಾನದ ಇತಿಹಾಸ: ಹೆಡಿಂಗ್ಲೆ ಮೈದಾನದಲ್ಲಿ ಇದುವರೆಗೂ 81 ಟೆಸ್ಟ್​ ಪಂದ್ಯಗಳು ನಡೆದಿವೆ. ಮೊಟ್ಟಮೊದಲ ಪಂದ್ಯ 1899ರಲ್ಲಿ ನಡೆದಿತ್ತು. ಅಂದಿನಿಂದಲೂ ಈ ಮೈದಾನ ಕೆಲವು ಅದ್ಭುತ ಪ್ರದರ್ಶನಗಳಿಗೆ ಸಾಕ್ಷಿಯಾಗಿದೆ

, ಇಲ್ಲಿ ಇಂಗ್ಲೆಂಡ್ 37 ಪಂದ್ಯಗಳನ್ನು ಗೆದ್ದರೆ, ಪ್ರವಾಸಿ ತಂಡಗಳು ಕೇವಲ 25 ಪಂದ್ಯಗಳನ್ನು ಗೆದ್ದಿವೆ. ಟಾಸ್ ಗೆದ್ದಿರುವ ತಂಡಗಳೇ ಹೆಚ್ಚು ಗೆಲುವು ಸಾಧಿಸಿರುವ ದಾಖಲೆಗಳಿವೆ. ಹಾಗಾಗಿ, ಟಾಸ್​ ನಿರ್ಣಾಯಕ ಪಾತ್ರ ವಹಿಸುತ್ತದೆ. ಇಲ್ಲಿ ಮೊದಲು ಬ್ಯಾಟಿಂಗ್​ ಮಾಡಿದ ತಂಡಗಳು 29 ಪಂದ್ಯಗಳನ್ನು ಗೆದ್ದುಕೊಂಡಿದ್ದರೆ, ಚೇಸಿಂಗ್​ ತಂಡಗಳು 37 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ.

ಲೀಡ್ಸ್‌ನಲ್ಲಿ ಭಾರತದ ಸೋಲು-ಗೆಲುವg: ಭಾರತ 1952ರಲ್ಲಿ ಲೀಡ್ಸ್‌ನಲ್ಲಿ​ ಮೊದಲ ಟೆಸ್ಟ್​ ಪಂದ್ಯ ಆಡಿತ್ತು. ಆದರೆ ಈ ಪಂದ್ಯದಲ್ಲಿ 7 ವಿಕೆಟ್​ಗಳ ಸೋಲು ಕಂಡಿತ್ತು. 1986ರಲ್ಲಿ ಕಪಿಲ್​ ದೇವ್​ ಮತ್ತು 2002ರಲ್ಲಿ ಸೌರವ್​ ಗಂಗೂಲಿ ನಾಯಕತ್ವದಲ್ಲಿ ಮಾತ್ರ ಗೆದ್ದಿದೆ. ಕೊನೆಯದಾಗಿ ವಿರಾಟ್​ ಕೊಹ್ಲಿ ನಾಯಕತ್ವದಲ್ಲಿ 2021ರಲ್ಲಿ ಟೆಸ್ಟ್​ ಪಂದ್ಯವನ್ನಾಡಿ 76 ರನ್​ಗಳಿಂದ ಸೋಲುಂಡಿತ್ತು.

ಇಂಗ್ಲೆಂಡ್​ ದಾಖಲೆ: ಇಂಗ್ಲೆಂಡ್​ ಇಲ್ಲಿ ಭಾರತದ ವಿರುದ್ಧ ಒಟ್ಟು 4 ಬಾರಿ (1952, 1959, 1967 ಮತ್ತು 2021) ಗೆದ್ದಿದೆ. ಉಭಯ ತಂಡಗಳ ನಡುವೆ 1979ರಲ್ಲಿ ನಡೆದ ಒಂದು ಪಂದ್ಯ ಡ್ರಾನಲ್ಲಿ ಕೊನೆಗೊಂಡಿತ್ತು

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles