ಯೋಗ, ಸಂಗೀತ, ಧ್ಯಾನದ ಮೂಲಕ ಆತ್ಮಸಾಕ್ಷಾತ್ಕಾರ

ಬೆಂಗಳೂರು, ಜೂ.21: ಅಂತರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನದ ಪ್ರಯುಕ್ತ ನಗರದ ಅರಮನೆ ಮೈದಾನದಲ್ಲಿ ಲೈಫ್‌ ಎಟರ್ನಲ್‌ ಟ್ರಸ್ಟ್‌ ವತಿಯಿಂದ ಸಹಜ ಯೋಗ, ಸಂಗೀತ ಹಾಗೂ ನೃತ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ ಮತ್ತು ಆಯುಷ್ ರಾಜ್ಯ ಸಚಿವರಾದ ಪ್ರತಾಪ ರಾವ್ ಜಾಧವ್ ಅವರು ವರ್ಚುವಲ್ ಮೂಲಕ ಉದ್ಘಾಟಿಸಿದರು. ಯೋಗವು ಕೇವಲ ವ್ಯಾಯಾಮವಲ್ಲ, ಇದು ದೇಹ ಮತ್ತು ಆತ್ಮವನ್ನು ಸಮತೋಲನಗೊಳಿಸುವ ದಾರಿ. ಇದು ಭಾರತದ ಆಧ್ಯಾತ್ಮಿಕ ಪರಂಪರೆ ಮತ್ತು ವಸುದೈವ ಕುಟುಂಬಕಂ ತತ್ವವನ್ನು ಸಾರಿ ಹೇಳುತ್ತದೆ. ಭಾರತವು ಜಾಗತಿಕವಾಗಿ  ಅಭಿವೃದ್ಧಿಯನ್ನು ಕಾಣುತ್ತಿದ್ದು, ಅದರಲ್ಲಿ ಯೋಗ ಕೂಡ ಪ್ರಮುಖವಾಗಿ ಖ್ಯಾತಿಯನ್ನು ಪಡೆದಿದೆ ಎಂದರು.

ಲೈಫ್ ಎಟರ್ನಲ್ ಟ್ರಸ್ಟ್‌ನ ಚೇರ್‌ಮೆನ್ ಡಾ. ಮನೋಜ್ ಕುಮಾರ್ ‌ಮಾತನಾಡಿ, ಸಹಜ ಯೋಗವು ಆತ್ಮ ಸಾಕ್ಷಾತ್ಕಾರಕ್ಕಾಗಿ ದೈವಿಕ ಮಾರ್ಗವನ್ನು ಸೂಚಿಸುತ್ತದೆ. ಇಂದಿನ ಕಾರ್ಯಕ್ರಮವು ಕೇವಲ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಆಂತರಿಕ ಪರಿವರ್ತನೆಗೆ ಮಾರ್ಗದರ್ಶಿಯಾಗಿತ್ತು ಎಂದರು.

ವಿಶ್ವ ಸಂಗೀತ ದಿನದ ಪ್ರಯುಕ್ತ 20ಕ್ಕೂ ಹೆಚ್ಚು ದೇಶಗಳ 200 ಕಲಾವಿದರು 100ಕ್ಕೂ ಹೆಚ್ಚು ಸಂಗೀತ ವಾದ್ಯಗಳೊಂದಿಗೆ ಸಂಗೀತವನ್ನು ಪ್ರಸ್ತುತಪಡಿಸಿದರು. ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸಂಗೀತಗಾರರು, ಗಾಯಕರು ಮತ್ತು ಭರತನಾಟ್ಯ ನೃತ್ಯಗಾರರನ್ನು ಒಳಗೊಂಡ “ವಂದೇ ಮಾತರಂ” ಸಾಂಸ್ಕೃತಿಕ ಪ್ರದರ್ಶನವನ್ನು ನೀಡಿದರು. ಅದಾಗ್ಯೂ ಯೋಗ, ಸಂಗೀತ ಮತ್ತು ‍ಧ್ಯಾನ ಸಮ್ಮಿಲನವುಳ್ಳ ಅದ್ಭುತ ಪ್ರದರ್ಶನ ನೀಡಿದ ಸಹಜ ಯೋಗ ಹಾಗೂ ಸಮರ್ಥನಂ ಟ್ರಸ್ಟ್‌ ಫಾರ್‌ ದಿ ಡಿಸೇಬಲ್ಡ್‌ ಸಂಸ್ಥೆಗೆ  ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಲಂಡನ್‌ ನಿಂದ ಎಕ್ಸೆಲೆನ್ಸ್‌ ಸರ್ಟಿಫಿಕೇಟ್‌ ನೀಡಲಾಯಿತು.    

ಅಂತರಾಷ್ಟ್ರೀಯ ಖ್ಯಾತಿಯ ಧನ್ವಂತರಿ ಯೋಗ ತಂಡದ ನೇತೃತ್ವದಲ್ಲಿ ಯೋಗ ಕಾರ್ಯಗಾರವು ನಡೆಯಿತು. ಈ ಸಂದರ್ಭದಲ್ಲಿ ನಟಿ ನಮ್ರತಾ ಗೌಡ,  ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸಿಇಒ (ಲಂಡನ್ ಯುಕೆ) ಸಂತೋಷ್ ಶುಕ್ಲ, ಡಾ, ರಾಜೀವ್‌, ಕಲ್ಪನಾ, ಸುದರ್ಶನ್‌ ಶರ್ಮಾ, ನಿಖಿಲ್‌ ಗೌಡ, ಉಷಾ ಅಯ್ಯರ್‌, ಪುನೀತ್‌ ಶ್ರೀಧರ್‌ , ಆರ್‌. ಚೇತನ್‌, ಡಾ. ಮಹಾಂತೇಶ್‌, ಡಾ. ಮಧು ಟೇಮ್ಲೆ, ತಿಥಿ ಬಳ್ಳಾ ಸೇರಿದಂತೆ ಇನ್ನೂ ಹಲವು ಗಣ್ಯರು ಮತ್ತು ಸಹಜ ಯೋಗ ಲೈಫ್ ಎಟರ್ನಲ್ ಟ್ರಸ್ಟ್‌ನ ಹಲವಾರು ಟ್ರಸ್ಟಿಗಳು ಪಾಲ್ಗೊಂಡಿದ್ದರು. 

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles