ಯೋಗ, ಸಂಗೀತ, ಧ್ಯಾನದ ಮೂಲಕ ಆತ್ಮಸಾಕ್ಷಾತ್ಕಾರ

ಬೆಂಗಳೂರು, ಜೂ.21: ಅಂತರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನದ ಪ್ರಯುಕ್ತ ನಗರದ ಅರಮನೆ ಮೈದಾನದಲ್ಲಿ ಲೈಫ್‌ ಎಟರ್ನಲ್‌ ಟ್ರಸ್ಟ್‌ ವತಿಯಿಂದ ಸಹಜ ಯೋಗ, ಸಂಗೀತ ಹಾಗೂ ನೃತ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ ಮತ್ತು ಆಯುಷ್ ರಾಜ್ಯ ಸಚಿವರಾದ ಪ್ರತಾಪ ರಾವ್ ಜಾಧವ್ ಅವರು ವರ್ಚುವಲ್ ಮೂಲಕ ಉದ್ಘಾಟಿಸಿದರು. ಯೋಗವು ಕೇವಲ ವ್ಯಾಯಾಮವಲ್ಲ, ಇದು ದೇಹ ಮತ್ತು ಆತ್ಮವನ್ನು ಸಮತೋಲನಗೊಳಿಸುವ ದಾರಿ. ಇದು ಭಾರತದ ಆಧ್ಯಾತ್ಮಿಕ ಪರಂಪರೆ ಮತ್ತು ವಸುದೈವ ಕುಟುಂಬಕಂ ತತ್ವವನ್ನು ಸಾರಿ ಹೇಳುತ್ತದೆ. ಭಾರತವು ಜಾಗತಿಕವಾಗಿ  ಅಭಿವೃದ್ಧಿಯನ್ನು ಕಾಣುತ್ತಿದ್ದು, ಅದರಲ್ಲಿ ಯೋಗ ಕೂಡ ಪ್ರಮುಖವಾಗಿ ಖ್ಯಾತಿಯನ್ನು ಪಡೆದಿದೆ ಎಂದರು.

ಲೈಫ್ ಎಟರ್ನಲ್ ಟ್ರಸ್ಟ್‌ನ ಚೇರ್‌ಮೆನ್ ಡಾ. ಮನೋಜ್ ಕುಮಾರ್ ‌ಮಾತನಾಡಿ, ಸಹಜ ಯೋಗವು ಆತ್ಮ ಸಾಕ್ಷಾತ್ಕಾರಕ್ಕಾಗಿ ದೈವಿಕ ಮಾರ್ಗವನ್ನು ಸೂಚಿಸುತ್ತದೆ. ಇಂದಿನ ಕಾರ್ಯಕ್ರಮವು ಕೇವಲ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಆಂತರಿಕ ಪರಿವರ್ತನೆಗೆ ಮಾರ್ಗದರ್ಶಿಯಾಗಿತ್ತು ಎಂದರು.

ವಿಶ್ವ ಸಂಗೀತ ದಿನದ ಪ್ರಯುಕ್ತ 20ಕ್ಕೂ ಹೆಚ್ಚು ದೇಶಗಳ 200 ಕಲಾವಿದರು 100ಕ್ಕೂ ಹೆಚ್ಚು ಸಂಗೀತ ವಾದ್ಯಗಳೊಂದಿಗೆ ಸಂಗೀತವನ್ನು ಪ್ರಸ್ತುತಪಡಿಸಿದರು. ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸಂಗೀತಗಾರರು, ಗಾಯಕರು ಮತ್ತು ಭರತನಾಟ್ಯ ನೃತ್ಯಗಾರರನ್ನು ಒಳಗೊಂಡ “ವಂದೇ ಮಾತರಂ” ಸಾಂಸ್ಕೃತಿಕ ಪ್ರದರ್ಶನವನ್ನು ನೀಡಿದರು. ಅದಾಗ್ಯೂ ಯೋಗ, ಸಂಗೀತ ಮತ್ತು ‍ಧ್ಯಾನ ಸಮ್ಮಿಲನವುಳ್ಳ ಅದ್ಭುತ ಪ್ರದರ್ಶನ ನೀಡಿದ ಸಹಜ ಯೋಗ ಹಾಗೂ ಸಮರ್ಥನಂ ಟ್ರಸ್ಟ್‌ ಫಾರ್‌ ದಿ ಡಿಸೇಬಲ್ಡ್‌ ಸಂಸ್ಥೆಗೆ  ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಲಂಡನ್‌ ನಿಂದ ಎಕ್ಸೆಲೆನ್ಸ್‌ ಸರ್ಟಿಫಿಕೇಟ್‌ ನೀಡಲಾಯಿತು.    

ಅಂತರಾಷ್ಟ್ರೀಯ ಖ್ಯಾತಿಯ ಧನ್ವಂತರಿ ಯೋಗ ತಂಡದ ನೇತೃತ್ವದಲ್ಲಿ ಯೋಗ ಕಾರ್ಯಗಾರವು ನಡೆಯಿತು. ಈ ಸಂದರ್ಭದಲ್ಲಿ ನಟಿ ನಮ್ರತಾ ಗೌಡ,  ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸಿಇಒ (ಲಂಡನ್ ಯುಕೆ) ಸಂತೋಷ್ ಶುಕ್ಲ, ಡಾ, ರಾಜೀವ್‌, ಕಲ್ಪನಾ, ಸುದರ್ಶನ್‌ ಶರ್ಮಾ, ನಿಖಿಲ್‌ ಗೌಡ, ಉಷಾ ಅಯ್ಯರ್‌, ಪುನೀತ್‌ ಶ್ರೀಧರ್‌ , ಆರ್‌. ಚೇತನ್‌, ಡಾ. ಮಹಾಂತೇಶ್‌, ಡಾ. ಮಧು ಟೇಮ್ಲೆ, ತಿಥಿ ಬಳ್ಳಾ ಸೇರಿದಂತೆ ಇನ್ನೂ ಹಲವು ಗಣ್ಯರು ಮತ್ತು ಸಹಜ ಯೋಗ ಲೈಫ್ ಎಟರ್ನಲ್ ಟ್ರಸ್ಟ್‌ನ ಹಲವಾರು ಟ್ರಸ್ಟಿಗಳು ಪಾಲ್ಗೊಂಡಿದ್ದರು. 

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles