ನೀವು ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಗಳೇ?

ಸಿಎಂ, ಡಿಸಿಎಂ ತಲೆದಂಡ ಆಗದೆ ವಿರಮಿಸೆವು:
ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತ, 11 ಜನ ಅಮಾಯಕರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತಲೆದಂಡ ಆಗದೆ ನಾವು ವಿರಮಿಸುವುದಿಲ್ಲ ಎಂದು ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕÀ ಛಲವಾದಿ ನಾರಾಯಣಸ್ವಾಮಿ ಅವರು ಎಚ್ಚರಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕ ಆರ್.ಅಶೋಕ್, ನಮ್ಮ ಶಾಸಕರು ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ನುಡಿದರು. ಈ ರಾಜ್ಯದ ಗೌರವ ಎತ್ತಿ ಹಿಡಿಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ತಿಳಿಸಿದರು.
ವಿಧಾನಸೌಧದಲ್ಲಿ ಆದ ಕಾರ್ಯಕ್ರಮ ನಾನು ನೋಡಿಕೊಂಡೆ. ನನಗೆ ಬೇರೆ ಯಾವುದೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಗಮನ ಸೆಳೆದರು. ಹಾಗಿದ್ದರೆ ನೀವು ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಗಳೇ? ಈ ರಾಜ್ಯಕ್ಕೆ ಮುಖ್ಯಮಂತ್ರಿ ಯಾರು? ಡಿ.ಕೆ.ಶಿವಕುಮಾರ್? ಪರಮೇಶ್ವರ್ ಅವರೇ? ಅಥವಾ ಮುಖ್ಯ ಕಾರ್ಯದರ್ಶಿಗಳೇ? ಎಂದು ಕೇಳಿದರು.
ನೀವು ಯಾವ ಯೋಗ್ಯತೆ ಇಟ್ಟುಕೊಂಡು ಮುಖ್ಯಮಂತ್ರಿ ಎಂದು ಕರೆಸಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ‘ಯು ಮಸ್ಟ್ ರಿಸೈನ್’ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. 11 ಜನರ ಸಾವಿನ ಪ್ರಕರಣದಲ್ಲಿ ನೀವೇ ಆರೋಪಿ. ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿಯವರ ಕ್ರೆಡಿಟ್ ವಾರ್‍ನಲ್ಲಿ ರಾಜ್ಯ ಇವತ್ತು ಕಪ್ಪು ಛಾಯೆಯಲ್ಲಿದೆ ಎಂದು ನುಡಿದರು.
ಮಾನ್ಯ ರಾಜ್ಯಪಾಲರು ಬರುವ ವೇಳೆ ಶಿಷ್ಟಾಚಾರ ಪಾಲಿಸಿಲ್ಲ. ಸರಕಾರವು ಶಿಷ್ಟಾಚಾರಗಳನ್ನು ಉಲ್ಲಂಘಿಸಿದೆ ಎಂದು ಅವರು ಆಕ್ಷೇಪಿಸಿದರು. ಸಾಂವಿಧಾನಿಕ ಶಿಷ್ಟಾಚಾರ ಉಲ್ಲಂಘನೆಗೆ ಸಿಎಂ, ಡಿಸಿಎಂ ಕಾರಣರಾಗಿದ್ದಾರೆ ಎಂದು ಟೀಕಿಸಿದರು. ಡಿಪಿಆರ್ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯದರ್ಶಿಗೆ ಇಂಚಿಂಚು ಮಾಹಿತಿ ಇರಬೇಕಿತ್ತು. ಅವರಿಗೆ ಏನು ಆದೇಶ ಇತ್ತೆಂಬ ತನಿಖೆ ಆಗಲಿ ಎಂದು ಒತ್ತಾಯಿಸಿದರು.

Hot this week

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

Topics

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

Related Articles